25.6 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

ಮುಂಡಾಜೆ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಇದರ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭವು ಮೇ 20 ರಂದು ಸೋಮಂತಡ್ಕ ಬ್ರದರ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ನೂತನ ಶಾಖೆಯನ್ನು ಮುಂಡಾಜೆ ಸಂತ ಮೇರಿ ಚರ್ಚ್ ನ ಧರ್ಮಗುರು ಫಾ. ಶಿಬಿ ಪುದಿಯರ ಉದ್ಘಾಟಿಸಿ ಶುಭಹಾರೈಸಿದರು. ಉಜಿರೆ ಸಂತ ಅಂತೋನಿ ಚರ್ಚಿನ ಧರ್ಮಗುರು ಫಾ. ಅಬೆಲ್ ಲೋಬೊ ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆನ್ರಿ ಲೋಬೊ ವಹಿಸಿದರು.

ಮುಂಡಾಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ, ಉಜಿರೆ ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಭದ್ರತಾ ಕೊಠಡಿ ಉದ್ಘಾಟಿಸಿದರು. ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದರು. ಮುಂಡಾಜೆ ಗ್ರಾಪಂ ಮಾಜಿ ಅಧ್ಯಕ್ಷ ಗಣೇಶ್ ಬಂಗೇರ, ಕಟ್ಟಡದ ಮಾಲಕ ಜಿ. ಮಹಮ್ಮದ್, ಸಂಘದ ಉಪಾಧ್ಯಕ್ಷ ಡೇನಿಸ್ ಸಿಕ್ವೇರ, ನಿರ್ದೇಶಕರಾದ ಜೇಮ್ಸ್ ಡಿಸೋಜ, ಜೋಸೆಫ್ ಪೀಟರ್ ಸಲ್ದಾನ, ಹೆರಾಲ್ಡ್ ಪಿಂಟೋ, ಅಲ್ಫೋನ್ಸ್ ರೊಡ್ರಿಗಸ್, ವಿನ್ಸೆಂಟ್ ಪ್ರಕಾಶ್ ಪಿಂಟೋ, ತೋಮಸ್ ಆರ್. ನೊರೊನ್ಹಾ, ಪ್ರಸಾದ್ ಪಿಂಟೋ,ರಫಾಯಲ್ ವೇಗಸ್, ಪೌಲಿನ್ ರೇಗೊ, ಪ್ಲಾವಿಯ ಡಿಸೋಜಾ, ವೃತ್ತಿಪರ ನಿರ್ದೇಶಕರಾದ ವಿನಯ್ ಜಾನ್ಸನ್ ಡಿಸೋಜ, ರಿಯೋ ಮೈಕಲ್ ರೊಡ್ರಿಗಸ್, ಸಿಇಒ ಐವನ್ ಗೊನ್ಸಾಲಿಸ್ ಉಪಸ್ಥಿತರಿದ್ದರು.


ಡಾ. ವಿಶಾಲ್ ಪಿಂಟೋ ಕಾರ್ಯಕ್ರಮ ನಿರೂಪಿಸಿದರು. ಸೋಮಂತಡ್ಕ ಶಾಖೆಯ ವ್ಯವಸ್ಥಾಪಕಿ ಸುನಿತಾ ಪಾಯಸ್ ವಂದಿಸಿದರು.

Related posts

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!