May 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶಿಕ್ಷಕ-ರಕ್ಷಕ ಸಭೆಯನ್ನು ಮೇ 18ರಂದುಶಾಲಾ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಿಜಯ ಕೆ ಇವರು ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅಧ್ಯಯನದ ಪ್ರಗತಿ, ಹಾಜರಾತಿ, ಪರೀಕ್ಷೆ ತಯಾರಿ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಪೋಷಕರ ಸಹಕಾರ ಅತ್ಯಂತ ಅಗತ್ಯವೆಂದು ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್‌ ಲೋಬೋರವರು ವಿದ್ಯಾರ್ಥಿಗಳು ಮನೆಯಲ್ಲಿ ನಿಯಮಿತವಾಗಿ ಓದುವ ಅಭ್ಯಾಸ ಮಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ನಡೆಯುವಂತಹ ಪರೀಕ್ಷೆಗೆ ಸೂಕ್ತ ರೀತಿಯಲ್ಲಿ ತಯಾರಾಗಬೇಕೆಂದು ಸಲಹೆ ನೀಡಿದರು ಹಾಗೂ ಸಂಸ್ಥೆಯ ಸಂಯೋಜಕರಾದ ಯಶವಂತ್‌ ಜಿ ನಾಯಕ್‌ ರವರು ವಿದ್ಯಾರ್ಥಿಗಳ ಉತ್ತಮ ಶಿಕ್ಷಣ, ಶಿಸ್ತು ಮತ್ತು ಭವಿಷ್ಯ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವವೆಂದು ತಿಳಿಸಿದರು. ಇದರ ಜೊತೆಯಲ್ಲಿ ಪೋಷಕರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಸಭೆಯಲ್ಲಿ ಎಸ್ ಎಸ್ ಎಲ್ ಸಿ ಪೋಷಕರು, ಎಲ್ಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ವರ್ಗ ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಹ ಶಿಕ್ಷಕಿಯಾದ ಶ್ರೀಮತಿ ಲಿಧಿಯಾ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya
error: Content is protected !!