25.9 C
ಪುತ್ತೂರು, ಬೆಳ್ತಂಗಡಿ
May 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಾಗಾರವು “ಸಕಾರಾತ್ಮಕ ಮಾನಸಿಕ ವರ್ತನೆ ಯ ಕುರಿತಾದ ಕಾರ್ಯಾಗಾರ ನಡೆಸಲಾಯಿತು. ಕಾರ್ಯಕ್ರಮವನ್ನು ಉಜಿರೆಯ ಮನೋವಿಜ್ಞಾನ ಉಪನ್ಯಾಸಕಿ ಡಾ. ಅಕ್ಷತಾ ಹಾಗೂ ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು. ಯುವಜನರ ಜೀವನ ಕಥೆಗಳ ಮೂಲಕ ವಿಷಯವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಸ್ವಯಂ ಅರಿವು ಕುರಿತು ಚರ್ಚೆ ನಡೆಸಲಾಯಿತು. ವಿದ್ಯಾರ್ಥಿಗಳು 9ನೇ ತರಗತಿಯಲ್ಲಿ ಹೇಗೆ ಅಧ್ಯಯನ ಮಾಡಿದ್ದರು ಎಂಬುದನ್ನು ವಿಮರ್ಶೆ ಮಾಡಿಕೊಂಡು, ಈ ಶೈಕ್ಷಣಿಕ ವರ್ಷದಲ್ಲಿ ಪರಿಣಾಮಕಾರಿಯಾಗಿ ಹೇಗೆ ಓದಬೇಕು ಎಂಬುದರ ಬಗ್ಗೆ ಸಲಹೆಗಳನ್ನು ಪಡೆದರು.

ಅಂತಿಮವಾಗಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಮಹತ್ವಾಕಾಂಕ್ಷೆಗಳು ಮತ್ತು ಗುರಿಗಳ ಕುರಿತು ಚಿಂತನೆ ಮಾಡಿ ಅವುಗಳನ್ನು ರೂಪಿಸಿಕೊಳ್ಳುವ ಚಟುವಟಿಕೆಯಲ್ಲಿ ಭಾಗವಹಿಸಿದರು. ಬಳಿಕ ಮಧ್ಯಾಹ್ನದ ನಂತರ ವೃತ್ತಿ ಮಾರ್ಗದರ್ಶನದ ಕುರಿತು ವರ್ಚುವಲ್ ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಬೆಂಗಳೂರಿನ ಸಿಎಂಆರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿನ ಸಹಪ್ರಾಧ್ಯಾಪಕ ಡಾ.ರವೀಶ್ ಕೆ. ಎಚ್ ನಡೆಸಿಕೊಟ್ಟರು. ಹಲವಾರು ಪ್ರಾತ್ಯಕ್ಷಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಬದುಕಿನ ಮಹತ್ವ, ಗುರಿ ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ಕೆಲಸ, ಸಮಯದ ಮಹತ್ವ, ಶ್ರಮದ ಮಹತ್ವ, ಹೊಸ ವಿಷಯಗಳನ್ನು ತಿಳಿಯಲು ತಿಳಿಸಿದರು. ಹತ್ತನೇ ತರಗತಿ ಬಳಿಕ ಯಾವೆಲ್ಲ ಕೋರ್ಸುಗಳಿವೆ ಎಂಬುದನ್ನು ತಿಳಿಸಿದರು .ಯಾವ ಕೋರ್ಸುಗಳಿಗೆ ಏನು ಮಾಡಬೇಕು ಎಂಬುದನ್ನು ತಿಳಿಸಿದರು .


ಈ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಹಾಗೂ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆ ನೀಡಿತು.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಾಗಾರದಲ್ಲಿ ಶಾಲಾ ಹತ್ತನೇ ತರಗತಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿ ಮಾಹಿತಿ ಕಲೆ ಹಾಕಿದರು.

Related posts

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
error: Content is protected !!