28.3 C
ಪುತ್ತೂರು, ಬೆಳ್ತಂಗಡಿ
August 22, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಹಳೆ ದ್ವೇಷವನ್ನು ಇಟ್ಟುಕೊಂಡು ಅತ್ತೆ ಮನೆಗೆ ಹೋಗಿ ಅವ್ಯಾಚ ಶಬ್ದಗಳಿಂದ ಅಳಿಯ ಬೈದು ಬಳಿಕ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ವಿವರ: ಆರೋಪಿ ಪ್ರಸನ್ನ ಕುಮಾರ್ ದೂರುದಾರ ಸುಜಾತ ಅವರ ಗಂಡನ ತಮ್ಮನಾಗಿದ್ದು ಸುಮಾರು 3 ರಿಂದ 4 ವರ್ಷಗಳ ಹಿಂದೆ ಆರೋಪಿ ಪ್ರಸನ್ನ ಕುಮಾರ್ ತನ್ನ ಸಂಬಂಧಿ ಸತೀಶ್ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿತನಾಗಿ ಜೀವನ ಪರ್ಯಾಂತ ಜೈಲಿನಲ್ಲಿ ಕೊಳೆಯಬೇಕು ಎಂದು ಹೇಳುತ್ತಿದ್ದ. ಈ ವಿಚಾರದಲ್ಲಿ ದ್ವೇಷ ಹೊಂದಿ ಆಗಾಗ ದೂರುದಾರರ 54 ವರ್ಷದ ತಾಯಿಯೊಂದಿಗೆ ಮಾತಿನ ಗಲಾಟೆ ನಡೆಸಿ ದೂರುದಾರರ ತಾಯಿಯನ್ನು ಕೊಲೆ ಮಾಡಿ ಬಳಿಕ ದೂರುದಾರರನ್ನು ಕೊಲೆ ಮಾಡುವುದಾಗಿ ಹೇಳುತ್ತಿದ್ದು. ಇದೇ ವಿಚಾರದಲ್ಲಿ ಪೂರ್ವ ದ್ವೇಷ ಹೊಂದಿ ಮೇ.19 ರಂದು ಮದ್ಯಾಹ್ನ ಸುಮಾರು 12:45 ಗಂಟೆಯಿಂದ 1 ಗಂಟೆಯ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಆರಂಬೋಡಿ ಗ್ರಾಮದ ದೆಲೋಡಿ ಮನೆಗೆ ದೂರುದಾರರ ಮನೆಗೆ ಅಕ್ರಮ ಪ್ರವೇಶ ಮಾಡಿ ಮಾರಕ ಆಯುಧವಾದ ಉದ್ದನೆಯ ಕತ್ತಿಯನ್ನು ಹಿಡಿದು ದೂರುದಾರರ ತಾಯಿಯನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳಿಂದ ಬೈದು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಹೇಳಿ ಕತ್ತಿಯಿಂದ ತಲೆಗೆ, ಮುಖಕ್ಕೆ, ಕೈಕಾಲುಗಳಿಗೆ ಕಡಿದು ತೀವ್ರ ಹಲ್ಲೆ ನಡೆಸಿದ್ದು ದೂರುದಾರರ ತಾಯಿಯನ್ನು ಮೂಡಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗದ ಮಹಿಳೆಯ ಮಗಳು ನೀಡಿದ ದೂರಿನ ಮೇರೆಗೆ ಮೇ.19 ರಂದು BNS
-2023(329(4),352,118(2),109) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ವೇಣೂರು ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ತಂಡ ಆರೋಪಿ ಆಳಿಯ ಹೊಸಂಗಡಿ ನಿವಾಸಿ ಪ್ರಸನ್ನ ಕುಮಾರ್(33) ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ವೇಣೂರಿನ ಕುರ್ಲೊಟ್ಟು ಜಂಕ್ಷನ್ ನಲ್ಲಿ ಮೇ.20 ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Related posts

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!