July 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಹಳೆ ದ್ವೇಷವನ್ನು ಇಟ್ಟುಕೊಂಡು ಅತ್ತೆ ಮನೆಗೆ ಹೋಗಿ ಅವ್ಯಾಚ ಶಬ್ದಗಳಿಂದ ಅಳಿಯ ಬೈದು ಬಳಿಕ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ವಿವರ: ಆರೋಪಿ ಪ್ರಸನ್ನ ಕುಮಾರ್ ದೂರುದಾರ ಸುಜಾತ ಅವರ ಗಂಡನ ತಮ್ಮನಾಗಿದ್ದು ಸುಮಾರು 3 ರಿಂದ 4 ವರ್ಷಗಳ ಹಿಂದೆ ಆರೋಪಿ ಪ್ರಸನ್ನ ಕುಮಾರ್ ತನ್ನ ಸಂಬಂಧಿ ಸತೀಶ್ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿತನಾಗಿ ಜೀವನ ಪರ್ಯಾಂತ ಜೈಲಿನಲ್ಲಿ ಕೊಳೆಯಬೇಕು ಎಂದು ಹೇಳುತ್ತಿದ್ದ. ಈ ವಿಚಾರದಲ್ಲಿ ದ್ವೇಷ ಹೊಂದಿ ಆಗಾಗ ದೂರುದಾರರ 54 ವರ್ಷದ ತಾಯಿಯೊಂದಿಗೆ ಮಾತಿನ ಗಲಾಟೆ ನಡೆಸಿ ದೂರುದಾರರ ತಾಯಿಯನ್ನು ಕೊಲೆ ಮಾಡಿ ಬಳಿಕ ದೂರುದಾರರನ್ನು ಕೊಲೆ ಮಾಡುವುದಾಗಿ ಹೇಳುತ್ತಿದ್ದು. ಇದೇ ವಿಚಾರದಲ್ಲಿ ಪೂರ್ವ ದ್ವೇಷ ಹೊಂದಿ ಮೇ.19 ರಂದು ಮದ್ಯಾಹ್ನ ಸುಮಾರು 12:45 ಗಂಟೆಯಿಂದ 1 ಗಂಟೆಯ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಆರಂಬೋಡಿ ಗ್ರಾಮದ ದೆಲೋಡಿ ಮನೆಗೆ ದೂರುದಾರರ ಮನೆಗೆ ಅಕ್ರಮ ಪ್ರವೇಶ ಮಾಡಿ ಮಾರಕ ಆಯುಧವಾದ ಉದ್ದನೆಯ ಕತ್ತಿಯನ್ನು ಹಿಡಿದು ದೂರುದಾರರ ತಾಯಿಯನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳಿಂದ ಬೈದು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಹೇಳಿ ಕತ್ತಿಯಿಂದ ತಲೆಗೆ, ಮುಖಕ್ಕೆ, ಕೈಕಾಲುಗಳಿಗೆ ಕಡಿದು ತೀವ್ರ ಹಲ್ಲೆ ನಡೆಸಿದ್ದು ದೂರುದಾರರ ತಾಯಿಯನ್ನು ಮೂಡಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗದ ಮಹಿಳೆಯ ಮಗಳು ನೀಡಿದ ದೂರಿನ ಮೇರೆಗೆ ಮೇ.19 ರಂದು BNS
-2023(329(4),352,118(2),109) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ವೇಣೂರು ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ತಂಡ ಆರೋಪಿ ಆಳಿಯ ಹೊಸಂಗಡಿ ನಿವಾಸಿ ಪ್ರಸನ್ನ ಕುಮಾರ್(33) ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ವೇಣೂರಿನ ಕುರ್ಲೊಟ್ಟು ಜಂಕ್ಷನ್ ನಲ್ಲಿ ಮೇ.20 ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya
error: Content is protected !!