July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

ಉಜಿರೆ ಶಾರದಾ ನಿಲಯದ ಅಹಿಶ್ಛತ್ರ ಗುರುಕುಲ ಹಾಗೂ ದಿ| ಕೃಷ್ಣ ಭಟ್ ಪ್ರತಿಷ್ಠಾನ ಚೂoತಾರು ಸಹಯೋಗದಲ್ಲಿ ನಡೆದ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಮೇ 20 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಎಮ್. ಎಲ್. ಗೋಪಾಲಕೃಷ್ಣ ಭಟ್ ವಹಿಸಿ ಇಂದಿನ ಕಾಲಘಟ್ಟದಲ್ಲಿ ನಮ್ಮ ಸನಾತನ ಸಂಸ್ಕಾರಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಅವಶ್ಯಕತೆ ಇದೆ ಎಂದರು.
ಪ್ರತಿಷ್ಠಾನದ ಕಾರ್ಯದರ್ಶಿಗಳಾದ ವೇದಮೂರ್ತಿ ಶಿವ ಪ್ರಸಾದ್ ಭಟ್, ಚೂಂತಾರು ಅವರು ಮಾತನಾಡಿ ಶಿಬಿರದಲ್ಲಿ ಕಲಿತ ಶ್ಲೋಕಗಳನ್ನು  ಮರೆತು ಹೋಗದಂತೆ ನಿರಂತರ ಅಭ್ಯಾಸ ನಡೆಸಬೇಕು. ಈ ದಿಸೆಯಲ್ಲಿ ಪೋಷಕರು ಸಹಕರಿಸಬೇಕು ಎಂದು ಕಿವಿ ಮಾತು ನುಡಿದರು.

ವಿದ್ಯಾರ್ಥಿಗಳು ತಾವು ಕಲಿತ ಶ್ಲೋಕಗಳನ್ನು ಹೇಳಿದರು. ಬಳಿಕ ಶಿಬಿರದ ಅಧ್ಯಾಪಕರಾದ ವೇದಮೂರ್ತಿ ಮುರಳೀಕೃಷ್ಣ ಭಟ್, ಹೇವಾಜೆ ಶಿಶಿಲರವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಹರಸಿದರು. ಪೋಷಕರು ಶಿಬಿರದ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಶಿಬಿರದ ಗುರುಗಳನ್ನು ಪ್ರತಿಷ್ಟಾನ ವತಿಯಿಂದ ಸನ್ಮಾನಿಸಲಾಯಿತು.
ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಸಹ ಪ್ರಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರು ವಂದಿಸಿದರು. ಅನಂತನಾರಾಯಣ ಹಾಗೂ ದೀಪಿಕಾ ದಂಪತಿಗಳು ಶಿಬಿರದ ಸಂಯೋಜನೆ ಮಾಡಿದ್ದರು.

Related posts

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya
error: Content is protected !!