25.9 C
ಪುತ್ತೂರು, ಬೆಳ್ತಂಗಡಿ
May 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

ಉಜಿರೆ ಶಾರದಾ ನಿಲಯದ ಅಹಿಶ್ಛತ್ರ ಗುರುಕುಲ ಹಾಗೂ ದಿ| ಕೃಷ್ಣ ಭಟ್ ಪ್ರತಿಷ್ಠಾನ ಚೂoತಾರು ಸಹಯೋಗದಲ್ಲಿ ನಡೆದ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಮೇ 20 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಎಮ್. ಎಲ್. ಗೋಪಾಲಕೃಷ್ಣ ಭಟ್ ವಹಿಸಿ ಇಂದಿನ ಕಾಲಘಟ್ಟದಲ್ಲಿ ನಮ್ಮ ಸನಾತನ ಸಂಸ್ಕಾರಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಅವಶ್ಯಕತೆ ಇದೆ ಎಂದರು.
ಪ್ರತಿಷ್ಠಾನದ ಕಾರ್ಯದರ್ಶಿಗಳಾದ ವೇದಮೂರ್ತಿ ಶಿವ ಪ್ರಸಾದ್ ಭಟ್, ಚೂಂತಾರು ಅವರು ಮಾತನಾಡಿ ಶಿಬಿರದಲ್ಲಿ ಕಲಿತ ಶ್ಲೋಕಗಳನ್ನು  ಮರೆತು ಹೋಗದಂತೆ ನಿರಂತರ ಅಭ್ಯಾಸ ನಡೆಸಬೇಕು. ಈ ದಿಸೆಯಲ್ಲಿ ಪೋಷಕರು ಸಹಕರಿಸಬೇಕು ಎಂದು ಕಿವಿ ಮಾತು ನುಡಿದರು.

ವಿದ್ಯಾರ್ಥಿಗಳು ತಾವು ಕಲಿತ ಶ್ಲೋಕಗಳನ್ನು ಹೇಳಿದರು. ಬಳಿಕ ಶಿಬಿರದ ಅಧ್ಯಾಪಕರಾದ ವೇದಮೂರ್ತಿ ಮುರಳೀಕೃಷ್ಣ ಭಟ್, ಹೇವಾಜೆ ಶಿಶಿಲರವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಹರಸಿದರು. ಪೋಷಕರು ಶಿಬಿರದ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಶಿಬಿರದ ಗುರುಗಳನ್ನು ಪ್ರತಿಷ್ಟಾನ ವತಿಯಿಂದ ಸನ್ಮಾನಿಸಲಾಯಿತು.
ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಸಹ ಪ್ರಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರು ವಂದಿಸಿದರು. ಅನಂತನಾರಾಯಣ ಹಾಗೂ ದೀಪಿಕಾ ದಂಪತಿಗಳು ಶಿಬಿರದ ಸಂಯೋಜನೆ ಮಾಡಿದ್ದರು.

Related posts

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!