ಬೆಳ್ತಂಗಡಿ: ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಅಪ್ರತಿಮ ವೀರತ್ವವನ್ನು ಮೆರೆದು ಕೆಚ್ಚೆದೆಯಿಂದ ಹೋರಾಡಿ ಬ್ರಿಟಿಷರಿಂದ 1837 ಮೇ 7ರಂದು ಗಲ್ಲಿಗೇರಿಸಲ್ಪಟ್ಟ ಉಬಾರ್ ಮಂಜ ಬೈದ್ಯರವರ ವೀರತ್ವವನ್ನು ಸಾರುವ ಸಲುವಾಗಿ ಉಪ್ಪಿನಂಗಡಿಯ ಮುಖ್ಯ ರಸ್ತೆಯ ವೃತ್ತಕ್ಕೆ ಮಂಜ ಬೈದ್ಯರ ಪುತ್ಥಳಿಯನ್ನು ಮತ್ತು ಹೆಸರು ನಾಮಕರಣ ಮಾಡಬೇಕೆಂದು ಸರಕಾರಕ್ಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈರವರ ಮುಖಾಂತರ ಮೇ 13ರಂದು ಬೆಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಸಮಿತಿ ಪ್ರಮುಖರಾದ ಸಂಜೀವ ಪೂಜಾರಿ ಬಿರ್ವ ,ಜಯಂತ್ ನಡುಬೈಲು ಪುತ್ತೂರು, ಡಾ. ರಾಜಾರಾಮ್ ಉಪ್ಪಿನಂಗಡಿ, ಉಲ್ಲಾಸ್ ಕೋಟ್ಯಾನ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.












