July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶಿಕ್ಷಕ-ರಕ್ಷಕ ಸಭೆಯನ್ನು ಮೇ 18ರಂದುಶಾಲಾ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಿಜಯ ಕೆ ಇವರು ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅಧ್ಯಯನದ ಪ್ರಗತಿ, ಹಾಜರಾತಿ, ಪರೀಕ್ಷೆ ತಯಾರಿ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಪೋಷಕರ ಸಹಕಾರ ಅತ್ಯಂತ ಅಗತ್ಯವೆಂದು ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್‌ ಲೋಬೋರವರು ವಿದ್ಯಾರ್ಥಿಗಳು ಮನೆಯಲ್ಲಿ ನಿಯಮಿತವಾಗಿ ಓದುವ ಅಭ್ಯಾಸ ಮಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ನಡೆಯುವಂತಹ ಪರೀಕ್ಷೆಗೆ ಸೂಕ್ತ ರೀತಿಯಲ್ಲಿ ತಯಾರಾಗಬೇಕೆಂದು ಸಲಹೆ ನೀಡಿದರು ಹಾಗೂ ಸಂಸ್ಥೆಯ ಸಂಯೋಜಕರಾದ ಯಶವಂತ್‌ ಜಿ ನಾಯಕ್‌ ರವರು ವಿದ್ಯಾರ್ಥಿಗಳ ಉತ್ತಮ ಶಿಕ್ಷಣ, ಶಿಸ್ತು ಮತ್ತು ಭವಿಷ್ಯ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವವೆಂದು ತಿಳಿಸಿದರು. ಇದರ ಜೊತೆಯಲ್ಲಿ ಪೋಷಕರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಸಭೆಯಲ್ಲಿ ಎಸ್ ಎಸ್ ಎಲ್ ಸಿ ಪೋಷಕರು, ಎಲ್ಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ವರ್ಗ ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಹ ಶಿಕ್ಷಕಿಯಾದ ಶ್ರೀಮತಿ ಲಿಧಿಯಾ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!