28.3 C
ಪುತ್ತೂರು, ಬೆಳ್ತಂಗಡಿ
August 22, 2026
Uncategorized

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ

ಬಂಟ್ವಾಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮೇ 20 ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಎ ಸಿ ಭಂಡಾರಿ ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ರೊಟೇರಿಯನ್ ಪ್ರಕಾಶ್ ಕಾರಂತ್ ನರಿಕೊಂಬು ಅವಿರೋಧವಾಗಿ ಆಯ್ಕೆಯಾದರು.

ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಜನಜಾಗೃತಿ ವೇದಿಕೆಯ 2026-27 ನೇ ಸಾಲಿನ ಕ್ರಿಯಾಯೋಜನೆಗಳ ಅನುಷ್ಠಾನದ ಕುರಿತು ಮಾಹಿತಿ ನೀಡಿ ವಾರ್ಷಿಕವಾಗಿ ಜಿಲ್ಲೆಯಲ್ಲಿ ಒಟ್ಟು 8 ಮದ್ಯವರ್ಜನ ಶಿಬಿರಗಳ ಆಯೋಜನೆ ಹಾಗೂ 180 ಶಾಲಾ ಕಾಲೇಜುಗಳಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಗೊಂಡ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಗಳನ್ನು ಹಾಗೂ 2025-26 ನೇ ಸಾಲಿನಲ್ಲಿ ವಿಶೇಷ ಸಾಧನೆ ಮಾಡಿದ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರುಗಳನ್ನು ಗೌರವಿಸಲಾಯಿತು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಕಾಶ್ ಕಾರಂತ್, ನಿಕಟಪೂರ್ವ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ರಾಜ್ಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್ ರವರನ್ನು ವಿಶೇಷವಾಗಿ ಅಭಿನಂದಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾ ಅಧ್ಯಕ್ಷರುಗಳಾದ ಸಾಜ ರಾಧಾಕೃಷ್ಣ ಆಳ್ವ, ಮಹಮ್ಮದ್ ಇಸ್ಮಾಯಿಲ್, ಎನ್.ಎ ರಾಮಚಂದ್ರ, ಜಿಲ್ಲಾ ಉಪಾಧ್ಯಕ್ಷರಾದ ಶಾರದಾ ರೈ, ಉಪಸ್ಥಿತರಿದ್ದರು.

ಸಭೆಯಲ್ಲಿ ಜನಜಾಗೃತಿ ವೇದಿಕೆಯ ತಾಲೂಕುವಾರು ಅಧ್ಯಕ್ಷರುಗಳಾದ ಬೆಳ್ತಂಗಡಿಯ ಗಿರೀಶ್ ಕೆಎಸ್, ಮಂಗಳೂರಿನ ಸುಖಲತಾ ಶೆಟ್ಟಿ, ಮೂಡಬಿದ್ರೆಯ ವಾಸುದೇವ ನಾಯಕ್, ಬಂಟ್ವಾಳದ ರಾಜಾರಾಮ್ ಶೆಟ್ಟಿ, ಪುತ್ತೂರಿನ ಸತೀಶ್ ನಾಯ್ಕ, ಮಂಜೇಶ್ವರದ ಮಂಜುನಾಥ ಆಳ್ವಾ, ಕಾಸರಗೋಡಿನ ಜಯರಾಮ ಪಾಠಾಳಿ, ಕಡಬದ ಇಂದುಶೇಖರ್ ಶೆಟ್ಟಿ, ಸುಳ್ಯದ ವೆಂಕಪ್ಪ ಗೌಡ, ಹಾಗೂ ತಾಲೂಕುವಾರು ನಿಕಟಪೂರ್ವ ಅಧ್ಯಕ್ಷರುಗಳಾದ ಕಾಸಿಂ ಮಲ್ಲಿಗೆ ಮನೆ, ಚಂದ್ರಶೇಖರ್ ಉಚ್ಚಿಲ, ಸುಭಾಷ್ ಚಂದ್ರ ಚೌಟ, ರೊನಾಲ್ಡ್ ಡಿಸೋಜ, ಲೋಕೇಶ್ ಹೆಗ್ಡೆ ಉರ್ಲಾ0ಡಿ , ಜಯಪ್ರಕಾಶ್ ನಾರಾಯಣ್ ತೊಟ್ಟೆ ತೋಡಿ, ಅಖಿಲೇಶ್ ನಗುಮೊಗಂ, ಮಹೇಶ್ ಕೆ ಸವಣೂರು, ಲೋಕನಾಥ ಅಮೆಚೂರು ಹಾಗೂ ಜಿಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

ಜನಜಾಗೃತಿ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ನಿರ್ದೇಶಕರಾದ ದಿನೇಶ್ ಡಿ ಸ್ವಾಗತಿಸಿ, ಜಿಲ್ಲೆ ಎರಡರ ನಿರ್ದೇಶಕ ಬಾಬು ನಾಯ್ಕ್ ಗತ ಸಭೆಯ ವರದಿ ವಾಚಿಸಿದರು. ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!