23.3 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

ಅಳದಂಗಡಿ: ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ ಮೇ.21 ರಂದು ಅಳದಂಗಡಿಯಲ್ಲಿ ಅದ್ದೂರಿಯಾಗಿ ಜರುಗಿತು.


ಕಾಯ೯ಕ್ರಮವನ್ನು ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಕುಲಶೇಖರ ಮಂಗಳೂರಿನ ಅಧ್ಯಕ್ಷ ರವಿರಾಜ ಹೆಗ್ಡೆ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಒಕ್ಕೂಟದಲ್ಲಿ ದಿನಕ್ಕೆ 4.65 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ಗ್ರಾಹಕರಿಗೆ ಹಾಲು ಸೇರಿದಂತೆ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ನೀಡಿ, ಗ್ರಾಹಕರಿಗೆ ಅತಿ ಹೆಚ್ಚಿನ ದರ ಕೊಡುವ ವ್ಯವಸ್ಥೆ ಒಕ್ಕೂಟ ಮಾಡುತ್ತಿದೆ ಎಂದು ಹೇಳಿದರು. ಸರಕಾರದ ಅನುದಾನ ಸೇರಿದಂತೆ ಗ್ರಾಹಕರಿಗೆ ಈಗ ಒಂದು ಲೀಟರ್ ಗೆ ರೂ.47 ದರ ಸಿಗುತ್ತದೆ. ಸ್ವಾವಲಂಬನೆಯ ಜೀವನನಕ್ಕೆ ಹೈನುಗಾರಿಕೆ ಈಗ ಪೂರಕವಾಗಿದೆ ಎಂದು ತಿಳಿಸಿದರು.

ಸಂತ ಪೀಟರ್ ಕ್ಲೇವರ್ ಚರ್ಚ್ ಅಳದಂಗಡಿ ಧರ್ಮಗುರುಗಳಾದ ರೇ| ಫಾ। ಎಲಿಯಾಸ್ ಡಿಸೋಜ ಆಶೀರ್ವಚನ ನೀಡಿ, ಅಳದಂಗಡಿ ಸಂಘ ಉತ್ತಮ ಚಟುವಟಿಕೆ ಮೂಲಕ ಮಾದರಿಯಾಗಿ ನಡೆಯುತ್ತಿದ್ದು, ಗ್ರಾಮದ ಜನರ ಸಹಕಾರ ಅನನ್ಯವಾಗಿದೆ ಎಂದರು.

ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಅಳದಂಗಡಿ ಅರಮನೆ ಇವರು ಉತ್ತಮ ಹೈನುಗಾರರನ್ನು, ಮಾಜಿ ಅಧ್ಯಕ್ಷರು ಗಳನ್ನು ಸನ್ಮಾನಿಸಿದರು.
ಹಾ.ಉ.ಸ.ಸಂಘ, ಅಳದಂಗಡಿ ಇದರ ಅಧ್ಯಕ್ಷರಾದ, ಪ್ರಶಾಂತ್ ವೇಗಸ್ ಅಧ್ಯಕ್ಷತೆ ವಹಿಸಿ, ಸಂಘ 50 ವಷ೯ಗಳ ಸಾಧನೆಯನ್ನು ತಿಳಿಸಿ, ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಂಬಳ ಓಟದ ಸಾಧಕ ಸತೀಶ್ ದೇವಾಡಿಗ ಅವರನ್ನು ಸನ್ಮಾನಿಸಿ, ಶುಭ ಹಾರೈಸಿದರು.
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಚ್ ಪ್ರಭಾಕರ, ಕಾಶಿಪಟ್ನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್, ಮಂಗಳೂರಿನ ನಿರ್ದೇಶಕರಾದ ಸಹಕಾರ ರತ್ನ ಸತೀಶ್ ಕೆ ಕಾಶಿಪಟ್ಟ, , ಅಳದಂಗಡಿಯ ಉದ್ಯಮಿಗಳಾದ ಸತೀಶ್ ಪೂಜಾರಿ, ನಡಾಯಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೀರಾ ಅವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಕೆ.ಎಂ.ಎಫ್ ಉಪ ವ್ಯವಸ್ಥಾಪಕ ಸತೀಶ್ ರಾವ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಅಳಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಅಳದಂಗಡಿ ಹಾ.ಉ.ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ್ ಸುವರ್ಣ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಲ್ಪ್ರೆಡ್ ಫೆರ್ನಾಂಡಿಸ್, ನಿರ್ದೇಶಕರಾದ ಪ್ರಸಾದ್ ಪಿಂಟೋ, ಗಣೇಶ್ ದೇವಾಡಿಗ, ಲ್ಯಾನ್ಸಿ ರೊಡ್ರಿಗಸ್, ಧಣ೯ಪ್ಪ ಪೂಜಾರಿ, ಸುಧೀರ್, ಹರೀಶ್ ಪೂಜಾರಿ, ಸುರೇಶ್ ಪೂಜಾರಿ, ಸುಂದರ್, ಸುನಿಲ್, ಶ್ರೀಮತಿ ಪುಷ್ಪಾವತಿ, ಶ್ರೀಮತಿ ಮಲ್ಲಿಕಾ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಪ್ರಶಾಂತ್ ವೇಗಸ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಲ್ಪ್ರೆಡ್ ಫೆರ್ನಾಂಡಿಸ್ ಸಂಘದ ಸಾಧನೆಯ ವರದಿ ವಾಚಿಸಿದರು.
ಶಿಕ್ಷಕ ಅಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

  • ಚಿತ್ರ: ಜ್ಯೋತಿಕಾ ಅಳದಂಗಡಿ

Related posts

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya
error: Content is protected !!