25.9 C
ಪುತ್ತೂರು, ಬೆಳ್ತಂಗಡಿ
May 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

ಉಜಿರೆ ಶಾರದಾ ನಿಲಯದ ಅಹಿಶ್ಛತ್ರ ಗುರುಕುಲ ಹಾಗೂ ದಿ| ಕೃಷ್ಣ ಭಟ್ ಪ್ರತಿಷ್ಠಾನ ಚೂoತಾರು ಸಹಯೋಗದಲ್ಲಿ ನಡೆದ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಮೇ 20 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಎಮ್. ಎಲ್. ಗೋಪಾಲಕೃಷ್ಣ ಭಟ್ ವಹಿಸಿ ಇಂದಿನ ಕಾಲಘಟ್ಟದಲ್ಲಿ ನಮ್ಮ ಸನಾತನ ಸಂಸ್ಕಾರಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಅವಶ್ಯಕತೆ ಇದೆ ಎಂದರು.
ಪ್ರತಿಷ್ಠಾನದ ಕಾರ್ಯದರ್ಶಿಗಳಾದ ವೇದಮೂರ್ತಿ ಶಿವ ಪ್ರಸಾದ್ ಭಟ್, ಚೂಂತಾರು ಅವರು ಮಾತನಾಡಿ ಶಿಬಿರದಲ್ಲಿ ಕಲಿತ ಶ್ಲೋಕಗಳನ್ನು  ಮರೆತು ಹೋಗದಂತೆ ನಿರಂತರ ಅಭ್ಯಾಸ ನಡೆಸಬೇಕು. ಈ ದಿಸೆಯಲ್ಲಿ ಪೋಷಕರು ಸಹಕರಿಸಬೇಕು ಎಂದು ಕಿವಿ ಮಾತು ನುಡಿದರು.

ವಿದ್ಯಾರ್ಥಿಗಳು ತಾವು ಕಲಿತ ಶ್ಲೋಕಗಳನ್ನು ಹೇಳಿದರು. ಬಳಿಕ ಶಿಬಿರದ ಅಧ್ಯಾಪಕರಾದ ವೇದಮೂರ್ತಿ ಮುರಳೀಕೃಷ್ಣ ಭಟ್, ಹೇವಾಜೆ ಶಿಶಿಲರವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಹರಸಿದರು. ಪೋಷಕರು ಶಿಬಿರದ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಶಿಬಿರದ ಗುರುಗಳನ್ನು ಪ್ರತಿಷ್ಟಾನ ವತಿಯಿಂದ ಸನ್ಮಾನಿಸಲಾಯಿತು.
ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಸಹ ಪ್ರಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರು ವಂದಿಸಿದರು. ಅನಂತನಾರಾಯಣ ಹಾಗೂ ದೀಪಿಕಾ ದಂಪತಿಗಳು ಶಿಬಿರದ ಸಂಯೋಜನೆ ಮಾಡಿದ್ದರು.

Related posts

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!