July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

ಬೆಳ್ತಂಗಡಿ: ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಅಪ್ರತಿಮ ವೀರತ್ವವನ್ನು ಮೆರೆದು ಕೆಚ್ಚೆದೆಯಿಂದ ಹೋರಾಡಿ ಬ್ರಿಟಿಷರಿಂದ 1837 ಮೇ 7ರಂದು ಗಲ್ಲಿಗೇರಿಸಲ್ಪಟ್ಟ ಉಬಾರ್ ಮಂಜ ಬೈದ್ಯರವರ ವೀರತ್ವವನ್ನು ಸಾರುವ ಸಲುವಾಗಿ ಉಪ್ಪಿನಂಗಡಿಯ ಮುಖ್ಯ ರಸ್ತೆಯ ವೃತ್ತಕ್ಕೆ ಮಂಜ ಬೈದ್ಯರ ಪುತ್ಥಳಿಯನ್ನು ಮತ್ತು ಹೆಸರು ನಾಮಕರಣ ಮಾಡಬೇಕೆಂದು ಸರಕಾರಕ್ಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈರವರ ಮುಖಾಂತರ ಮೇ 13ರಂದು ಬೆಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಸಮಿತಿ ಪ್ರಮುಖರಾದ ಸಂಜೀವ ಪೂಜಾರಿ ಬಿರ್ವ ,ಜಯಂತ್ ನಡುಬೈಲು ಪುತ್ತೂರು, ಡಾ. ರಾಜಾರಾಮ್ ಉಪ್ಪಿನಂಗಡಿ, ಉಲ್ಲಾಸ್ ಕೋಟ್ಯಾನ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!