25.9 C
ಪುತ್ತೂರು, ಬೆಳ್ತಂಗಡಿ
May 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಾಗಾರವು “ಸಕಾರಾತ್ಮಕ ಮಾನಸಿಕ ವರ್ತನೆ ಯ ಕುರಿತಾದ ಕಾರ್ಯಾಗಾರ ನಡೆಸಲಾಯಿತು. ಕಾರ್ಯಕ್ರಮವನ್ನು ಉಜಿರೆಯ ಮನೋವಿಜ್ಞಾನ ಉಪನ್ಯಾಸಕಿ ಡಾ. ಅಕ್ಷತಾ ಹಾಗೂ ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು. ಯುವಜನರ ಜೀವನ ಕಥೆಗಳ ಮೂಲಕ ವಿಷಯವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಸ್ವಯಂ ಅರಿವು ಕುರಿತು ಚರ್ಚೆ ನಡೆಸಲಾಯಿತು. ವಿದ್ಯಾರ್ಥಿಗಳು 9ನೇ ತರಗತಿಯಲ್ಲಿ ಹೇಗೆ ಅಧ್ಯಯನ ಮಾಡಿದ್ದರು ಎಂಬುದನ್ನು ವಿಮರ್ಶೆ ಮಾಡಿಕೊಂಡು, ಈ ಶೈಕ್ಷಣಿಕ ವರ್ಷದಲ್ಲಿ ಪರಿಣಾಮಕಾರಿಯಾಗಿ ಹೇಗೆ ಓದಬೇಕು ಎಂಬುದರ ಬಗ್ಗೆ ಸಲಹೆಗಳನ್ನು ಪಡೆದರು.

ಅಂತಿಮವಾಗಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಮಹತ್ವಾಕಾಂಕ್ಷೆಗಳು ಮತ್ತು ಗುರಿಗಳ ಕುರಿತು ಚಿಂತನೆ ಮಾಡಿ ಅವುಗಳನ್ನು ರೂಪಿಸಿಕೊಳ್ಳುವ ಚಟುವಟಿಕೆಯಲ್ಲಿ ಭಾಗವಹಿಸಿದರು. ಬಳಿಕ ಮಧ್ಯಾಹ್ನದ ನಂತರ ವೃತ್ತಿ ಮಾರ್ಗದರ್ಶನದ ಕುರಿತು ವರ್ಚುವಲ್ ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಬೆಂಗಳೂರಿನ ಸಿಎಂಆರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿನ ಸಹಪ್ರಾಧ್ಯಾಪಕ ಡಾ.ರವೀಶ್ ಕೆ. ಎಚ್ ನಡೆಸಿಕೊಟ್ಟರು. ಹಲವಾರು ಪ್ರಾತ್ಯಕ್ಷಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಬದುಕಿನ ಮಹತ್ವ, ಗುರಿ ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ಕೆಲಸ, ಸಮಯದ ಮಹತ್ವ, ಶ್ರಮದ ಮಹತ್ವ, ಹೊಸ ವಿಷಯಗಳನ್ನು ತಿಳಿಯಲು ತಿಳಿಸಿದರು. ಹತ್ತನೇ ತರಗತಿ ಬಳಿಕ ಯಾವೆಲ್ಲ ಕೋರ್ಸುಗಳಿವೆ ಎಂಬುದನ್ನು ತಿಳಿಸಿದರು .ಯಾವ ಕೋರ್ಸುಗಳಿಗೆ ಏನು ಮಾಡಬೇಕು ಎಂಬುದನ್ನು ತಿಳಿಸಿದರು .


ಈ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಹಾಗೂ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆ ನೀಡಿತು.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಾಗಾರದಲ್ಲಿ ಶಾಲಾ ಹತ್ತನೇ ತರಗತಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿ ಮಾಹಿತಿ ಕಲೆ ಹಾಕಿದರು.

Related posts

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya
error: Content is protected !!