July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

ಕಕ್ಯಪದವು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ಕೆ 625 ರಲ್ಲಿ 616ಅಂಕವನ್ನು ಪಡೆದು ರಾಜ್ಯಕ್ಕೆ ಹತ್ತನೇ ಸ್ಥಾನ‌ ಗಳಿಸಿ, ಶಾಲೆಗೆ ಪ್ರಥಮ ಸ್ಥಾನದಿಂದ ತೇರ್ಗೆಡೆ ಹೊಂದಿದ್ದಾರೆ. ಇವರು ತೆಂಕಕಜೆಕಾರು ಗ್ರಾಮದ ಕೊಡಂಗೆ ನಿವಾಸಿ ರವಿ ಕೆ ಮತ್ತು ಮೀನಾಕ್ಷಿ ದಂಪತಿ ಪುತ್ರಿ.

ವಿಧ್ಯಾರ್ಥಿನಿ ದೀಪ್ತಿ, ಕನ್ನಡ ಹಾಗೂ ಹಿಂದಿ ವಿಷಯದಲ್ಲಿ ಪೂರ್ಣ ಅಂಕ ಗಳಿಸಿದ್ದು, ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ 95 ಅಂಕ ಗಳಿಸಿದ್ದರು. ಆದರೆ ಮರು ಮೌಲ್ಯ ಮಾಪನದಲ್ಲಿ ಎರಡು ಅಂಕ ಹೆಚ್ಚು ಗಳಿಸಿ 97 ಅಂಕಗಳೊಂದಿಗೆ ಒಟ್ಟು ಫಲಿತಾಂಶ 98.56 ಪಡೆದಿರುತ್ತಾರೆ.

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಎಲ್‌ಸಿಆರ್ ಇಂಡಿಯನ್ ವಿದ್ಯಾಸಂಸ್ಥೆ ಕಳೆದ ಹತ್ತು ವರ್ಷಗಳಿಂದ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಸಹಿತ ಇನ್ನಿತರ ಕಾರ್ಯ ಚಟುವಟಿಕೆಯಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲೆ, ತಾಲೂಕಿನಲ್ಲಿ ಸಾಧನೆಗೈದು ಹೆಸರುವಾಸಿಯಾಗಿದೆ. ಗ್ರಾಮೀಣ ಭಾಗದಲ್ಲಿರುವ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಕ್ಷಿಯಾಗಿದೆ.

Related posts

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!