25.7 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅದ್ವಿತೀಯ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (ವಿಜ್ಞಾನ ವಿಭಾಗ) ಅವರಿಗೆ ಮತ್ತೆರಡು ಅಂಕ ಸೇರ್ಪಡೆಯಾಗಿ (597) ಶೇ.99.50 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯಕ್ಕೆ 3 ನೇ ಸ್ಥಾನ ಪಡೆದಿದ್ದಾರೆ. ಜೆಇಇ ಮೈನ್ಸ್ ನಲ್ಲಿ 99.646 ಪರ್ಸೆಂಟೈಲ್ ದಾಖಲಿಸಿದ್ದ ಚಿನ್ಮಯ್ ಬೋರ್ಡ್ ಪರೀಕ್ಷೆಯಲ್ಲೂ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ.

ಚಿನ್ಮಯ್ ಜಿ.ಕೆ. ಅವರು (ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಗಣಕ ವಿಜ್ಞಾನ-100) ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ನೇಹಾ ಭಟ್ ಅವರು ಮರು ಪರೀಕ್ಷೆಗೆ ಹಾಜರಾಗುವ ಮೂಲಕ 600 ರಲ್ಲಿ 592 ಅಂಕ (ವ್ಯವಹಾರ ಅಧ್ಯಯನ-100, ಲೆಕ್ಕಶಾಸ್ತ್ರ-100, ಗಣಕ ವಿಜ್ಞಾನ-100) ದೊಂದಿಗೆ ರಾಜ್ಯಕ್ಕೆ 8 ನೇ ಸ್ಥಾನಿಯಾಗಿದ್ದಾರೆ. ಪ್ರಸ್ತುತ ಸಿಎ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

ಈ ಹಿಂದೆ ವಿಜ್ಞಾನದಲ್ಲಿ ತನುಶ್ರೀ (593) ಶೇ.98.83% (ರಸಾಯನಶಾಸ್ತ್ರ-100, ಭೌತಶಾಸ್ತ್ರ-100 ಗಣಿತಶಾಸ್ತ್ರ-100, ಜೀವಶಾಸ್ತ್ರ-100) ನಾಲ್ಕು ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದು ರಾಜ್ಯಕ್ಕೆ 7 ನೇ ಸ್ಥಾನಿಯಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಧ್ಯಾನ ಈ ಹಿಂದೆ (591) ಅಂಕ (ಕನ್ನಡ-100, ವ್ಯವಹಾರ ಅಧ್ಯಯನ-100, ಲೆಕ್ಕಶಾಸ್ತ್ರ-100) ಶೇ.98.50 ಅಂಕ ಪಡೆದು ರಾಜ್ಯಕ್ಕೆ 9 ನೇ ಸ್ಥಾನಿಯಾಗಿದ್ದರು.

ಈ ಫಲಿತಾಂಶದಿಂದ ವಿದ್ವತ್ ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಗೆ ಬಂದಂತಾಗಿದ್ದು, ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳ ಪಾಲಿಗೆ ಪ್ರಪ್ರಥಮ ಆಯ್ಕೆಯಾಗಿದೆ. ಈ ಫಲಿತಾಂಶವನ್ನು ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಖಜಾಂಚಿ ಎಂ.ಕೆ.ಕಾಶಿನಾಥ್., ಶೈಕ್ಷಣಿಕ ನಿರ್ದೇಶಕ ಗಂಗಾಧರ್ ಇ.ಮಂಡಗಳಲೆ ಪ್ರಶಂಸಿದ್ದಾರೆ.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya
error: Content is protected !!