23.4 C
ಪುತ್ತೂರು, ಬೆಳ್ತಂಗಡಿ
August 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

ಉಪ್ಪಿನಂಗಡಿ: ಉಪ್ಪಿನಂಗಡಿಯಿಂದ ಪಟ್ಟೂರುಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮೇ 22ರ ಸಂಜೆ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನಡೆದಿದೆ.

ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕರಾದ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಹೆದ್ದಾರಿ ಬದಿಯಿಂದ ಕೆಳಕ್ಕೆ ಉರುಳಿ ಆಳವಾದ ಹೊಂಡಕ್ಕೆ ಬಿದ್ದಿದೆ. ಘಟನೆಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಲ್ಪಸ್ವಲ್ಪ ತರಚುಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪರಿಚಿತರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು.

Related posts

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!