23.6 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

ಕಕ್ಯಪದವು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ಕೆ 625 ರಲ್ಲಿ 616ಅಂಕವನ್ನು ಪಡೆದು ರಾಜ್ಯಕ್ಕೆ ಹತ್ತನೇ ಸ್ಥಾನ‌ ಗಳಿಸಿ, ಶಾಲೆಗೆ ಪ್ರಥಮ ಸ್ಥಾನದಿಂದ ತೇರ್ಗೆಡೆ ಹೊಂದಿದ್ದಾರೆ. ಇವರು ತೆಂಕಕಜೆಕಾರು ಗ್ರಾಮದ ಕೊಡಂಗೆ ನಿವಾಸಿ ರವಿ ಕೆ ಮತ್ತು ಮೀನಾಕ್ಷಿ ದಂಪತಿ ಪುತ್ರಿ.

ವಿಧ್ಯಾರ್ಥಿನಿ ದೀಪ್ತಿ, ಕನ್ನಡ ಹಾಗೂ ಹಿಂದಿ ವಿಷಯದಲ್ಲಿ ಪೂರ್ಣ ಅಂಕ ಗಳಿಸಿದ್ದು, ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ 95 ಅಂಕ ಗಳಿಸಿದ್ದರು. ಆದರೆ ಮರು ಮೌಲ್ಯ ಮಾಪನದಲ್ಲಿ ಎರಡು ಅಂಕ ಹೆಚ್ಚು ಗಳಿಸಿ 97 ಅಂಕಗಳೊಂದಿಗೆ ಒಟ್ಟು ಫಲಿತಾಂಶ 98.56 ಪಡೆದಿರುತ್ತಾರೆ.

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಎಲ್‌ಸಿಆರ್ ಇಂಡಿಯನ್ ವಿದ್ಯಾಸಂಸ್ಥೆ ಕಳೆದ ಹತ್ತು ವರ್ಷಗಳಿಂದ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಸಹಿತ ಇನ್ನಿತರ ಕಾರ್ಯ ಚಟುವಟಿಕೆಯಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲೆ, ತಾಲೂಕಿನಲ್ಲಿ ಸಾಧನೆಗೈದು ಹೆಸರುವಾಸಿಯಾಗಿದೆ. ಗ್ರಾಮೀಣ ಭಾಗದಲ್ಲಿರುವ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಕ್ಷಿಯಾಗಿದೆ.

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya
error: Content is protected !!