ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅದ್ವಿತೀಯ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (ವಿಜ್ಞಾನ ವಿಭಾಗ) ಅವರಿಗೆ ಮತ್ತೆರಡು ಅಂಕ ಸೇರ್ಪಡೆಯಾಗಿ (597) ಶೇ.99.50 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯಕ್ಕೆ 3 ನೇ ಸ್ಥಾನ ಪಡೆದಿದ್ದಾರೆ. ಜೆಇಇ ಮೈನ್ಸ್ ನಲ್ಲಿ 99.646 ಪರ್ಸೆಂಟೈಲ್ ದಾಖಲಿಸಿದ್ದ ಚಿನ್ಮಯ್ ಬೋರ್ಡ್ ಪರೀಕ್ಷೆಯಲ್ಲೂ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ.
ಚಿನ್ಮಯ್ ಜಿ.ಕೆ. ಅವರು (ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಗಣಕ ವಿಜ್ಞಾನ-100) ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ನೇಹಾ ಭಟ್ ಅವರು ಮರು ಪರೀಕ್ಷೆಗೆ ಹಾಜರಾಗುವ ಮೂಲಕ 600 ರಲ್ಲಿ 592 ಅಂಕ (ವ್ಯವಹಾರ ಅಧ್ಯಯನ-100, ಲೆಕ್ಕಶಾಸ್ತ್ರ-100, ಗಣಕ ವಿಜ್ಞಾನ-100) ದೊಂದಿಗೆ ರಾಜ್ಯಕ್ಕೆ 8 ನೇ ಸ್ಥಾನಿಯಾಗಿದ್ದಾರೆ. ಪ್ರಸ್ತುತ ಸಿಎ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ಈ ಹಿಂದೆ ವಿಜ್ಞಾನದಲ್ಲಿ ತನುಶ್ರೀ (593) ಶೇ.98.83% (ರಸಾಯನಶಾಸ್ತ್ರ-100, ಭೌತಶಾಸ್ತ್ರ-100 ಗಣಿತಶಾಸ್ತ್ರ-100, ಜೀವಶಾಸ್ತ್ರ-100) ನಾಲ್ಕು ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದು ರಾಜ್ಯಕ್ಕೆ 7 ನೇ ಸ್ಥಾನಿಯಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಧ್ಯಾನ ಈ ಹಿಂದೆ (591) ಅಂಕ (ಕನ್ನಡ-100, ವ್ಯವಹಾರ ಅಧ್ಯಯನ-100, ಲೆಕ್ಕಶಾಸ್ತ್ರ-100) ಶೇ.98.50 ಅಂಕ ಪಡೆದು ರಾಜ್ಯಕ್ಕೆ 9 ನೇ ಸ್ಥಾನಿಯಾಗಿದ್ದರು.
ಈ ಫಲಿತಾಂಶದಿಂದ ವಿದ್ವತ್ ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಗೆ ಬಂದಂತಾಗಿದ್ದು, ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳ ಪಾಲಿಗೆ ಪ್ರಪ್ರಥಮ ಆಯ್ಕೆಯಾಗಿದೆ. ಈ ಫಲಿತಾಂಶವನ್ನು ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಖಜಾಂಚಿ ಎಂ.ಕೆ.ಕಾಶಿನಾಥ್., ಶೈಕ್ಷಣಿಕ ನಿರ್ದೇಶಕ ಗಂಗಾಧರ್ ಇ.ಮಂಡಗಳಲೆ ಪ್ರಶಂಸಿದ್ದಾರೆ.












