25.7 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

ನೆಲ್ಯಾಡಿ : ಜೀವ ಉಳಿಸುವ ಮಹತ್ವದ ಸೇವೆಯಲ್ಲಿ ನಿರಂತರ ತೊಡಗಿರುವ ಆಂಬುಲೆನ್ಸ್ ಚಾಲಕರನ್ನು ಗೌರವಿಸುವ ನಿಟ್ಟಿನಲ್ಲಿ ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದ ಎಸ್.ಎಂ.ವೈ.ಎಂ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಾಡಿನ ಜೀವ ರಕ್ಷಕರಾದ ಆಂಬುಲೆನ್ಸ್ ಚಾಲಕರನ್ನು ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಂದನೀಯ ಫಾ. ಶಾಜಿ ಮಾತ್ಯು, “ಸಾವು–ಬದುಕಿನ ನಡುವಿನ ಅತಿ ಸಂಕಷ್ಟದ ಕ್ಷಣಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುವ ಆಂಬುಲೆನ್ಸ್ ಚಾಲಕರ ಸೇವೆ ಅಮೂಲ್ಯವಾದದ್ದು. ಸಮಾಜವು ಅವರ ತ್ಯಾಗ ಮತ್ತು ಸೇವೆಯನ್ನು ಗುರುತಿಸಿ ಗೌರವಿಸುವುದು ಅತ್ಯವಶ್ಯಕ,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಂಬುಲೆನ್ಸ್ ಚಾಲಕರಾದ ಪಿ. ಮೊಹಮ್ಮದ್ ಮಸೂದ್, ಅಬ್ದುಲ್ ಸಮದ್ ಹಾಗೂ ಪ್ರಜ್ವಲ್ ಪಿ.ಜೆ. ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತೃವೇದಿಕೆ ಅಧ್ಯಕ್ಷೆ ಸುಜಾ ಜೇಮ್ಸ್, ಸಿಸ್ಟರ್ ಲಿಸ್ ಮಾತ್ಯು, ಯುವಜನ ಸಂಘದ ದಿಶಾ ಹಾಗೂ ಜಿತು, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸಂಘದ ಸಣ್ಣಿ ಉಪಸ್ಥಿತರಿದ್ದರು. ಲೆಫ್ಟಿನೆಂಟ್ ಜನರಲ್ ಜಿನೋಜ್ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು. ಬೆರಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya
error: Content is protected !!