24.1 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

ವೇಣೂರು: ಬಕ್ರೀದ್ ಪ್ರಯುಕ್ತ ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರುಗಳ ಸಭೆಯು ವೇಣೂರು
ಪಿ ಎಸ್ ಐ ಶ್ರೀಮತಿ ಒಮನ ಎನ್ ಕೆ ರವರ ಅಧ್ಯಕ್ಷತೆಯಲ್ಲಿ ಮೇ 21 ರಂದು ವೇಣೂರು ಆರಕ್ಷಕ ಸ್ಟೇಷನ್ ನಲ್ಲಿ ನಡೆಯಿತು.

ಪಿ ಎಸ್ ಐ ಮಾತಾಡಿ ಇಲಾಖಾ ವತಿಯಿಂದ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಸರ್ವವಿಧದ ಸಹಕಾರ ನೀಡುವುದಾಗಿ ಭರವಸೆ ನೀಡಿದರಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸುವಂತೆ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರುಗಳಿಗೆ ಮನವಿ ಮಾಡಿದರು.


ಪಡ್ಡoದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಸಮಿಯುಲ್ಲಾ ಖಾನ್ ಪಿಲ್ಲಿಯಾ, ಇಕ್ಬಾಲ್ ಖಾನ್ ವೇಣೂರು, ಅಲಿಯಬ್ಬ ಪುಲಬೇ, ಸಯ್ಯದ್ ಬಶೀರ್ ವೇಣೂರು, ಅಬ್ದುಲ್ ಖಾದರ್ ಅಳದಂಗಡಿ , ಉಳ್ತೂರು ಅಜೀಜುದ್ದೀನ್, ಅಶ್ರಫ್ ಶಾಂತಿ ನಗರ ಉಪಸ್ಥಿತರಿದ್ದರು. ಹೆಡ್ ಕಾನ್ಸ್ಟೇಬಲ್ ರೋಹಿನಾತ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!