25.7 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅದ್ವಿತೀಯ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (ವಿಜ್ಞಾನ ವಿಭಾಗ) ಅವರಿಗೆ ಮತ್ತೆರಡು ಅಂಕ ಸೇರ್ಪಡೆಯಾಗಿ (597) ಶೇ.99.50 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯಕ್ಕೆ 3 ನೇ ಸ್ಥಾನ ಪಡೆದಿದ್ದಾರೆ. ಜೆಇಇ ಮೈನ್ಸ್ ನಲ್ಲಿ 99.646 ಪರ್ಸೆಂಟೈಲ್ ದಾಖಲಿಸಿದ್ದ ಚಿನ್ಮಯ್ ಬೋರ್ಡ್ ಪರೀಕ್ಷೆಯಲ್ಲೂ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ.

ಚಿನ್ಮಯ್ ಜಿ.ಕೆ. ಅವರು (ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಗಣಕ ವಿಜ್ಞಾನ-100) ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ನೇಹಾ ಭಟ್ ಅವರು ಮರು ಪರೀಕ್ಷೆಗೆ ಹಾಜರಾಗುವ ಮೂಲಕ 600 ರಲ್ಲಿ 592 ಅಂಕ (ವ್ಯವಹಾರ ಅಧ್ಯಯನ-100, ಲೆಕ್ಕಶಾಸ್ತ್ರ-100, ಗಣಕ ವಿಜ್ಞಾನ-100) ದೊಂದಿಗೆ ರಾಜ್ಯಕ್ಕೆ 8 ನೇ ಸ್ಥಾನಿಯಾಗಿದ್ದಾರೆ. ಪ್ರಸ್ತುತ ಸಿಎ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

ಈ ಹಿಂದೆ ವಿಜ್ಞಾನದಲ್ಲಿ ತನುಶ್ರೀ (593) ಶೇ.98.83% (ರಸಾಯನಶಾಸ್ತ್ರ-100, ಭೌತಶಾಸ್ತ್ರ-100 ಗಣಿತಶಾಸ್ತ್ರ-100, ಜೀವಶಾಸ್ತ್ರ-100) ನಾಲ್ಕು ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದು ರಾಜ್ಯಕ್ಕೆ 7 ನೇ ಸ್ಥಾನಿಯಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಧ್ಯಾನ ಈ ಹಿಂದೆ (591) ಅಂಕ (ಕನ್ನಡ-100, ವ್ಯವಹಾರ ಅಧ್ಯಯನ-100, ಲೆಕ್ಕಶಾಸ್ತ್ರ-100) ಶೇ.98.50 ಅಂಕ ಪಡೆದು ರಾಜ್ಯಕ್ಕೆ 9 ನೇ ಸ್ಥಾನಿಯಾಗಿದ್ದರು.

ಈ ಫಲಿತಾಂಶದಿಂದ ವಿದ್ವತ್ ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಗೆ ಬಂದಂತಾಗಿದ್ದು, ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳ ಪಾಲಿಗೆ ಪ್ರಪ್ರಥಮ ಆಯ್ಕೆಯಾಗಿದೆ. ಈ ಫಲಿತಾಂಶವನ್ನು ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಖಜಾಂಚಿ ಎಂ.ಕೆ.ಕಾಶಿನಾಥ್., ಶೈಕ್ಷಣಿಕ ನಿರ್ದೇಶಕ ಗಂಗಾಧರ್ ಇ.ಮಂಡಗಳಲೆ ಪ್ರಶಂಸಿದ್ದಾರೆ.

Related posts

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!