24.9 C
ಪುತ್ತೂರು, ಬೆಳ್ತಂಗಡಿ
May 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

ನೆಲ್ಯಾಡಿ : ಜೀವ ಉಳಿಸುವ ಮಹತ್ವದ ಸೇವೆಯಲ್ಲಿ ನಿರಂತರ ತೊಡಗಿರುವ ಆಂಬುಲೆನ್ಸ್ ಚಾಲಕರನ್ನು ಗೌರವಿಸುವ ನಿಟ್ಟಿನಲ್ಲಿ ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದ ಎಸ್.ಎಂ.ವೈ.ಎಂ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಾಡಿನ ಜೀವ ರಕ್ಷಕರಾದ ಆಂಬುಲೆನ್ಸ್ ಚಾಲಕರನ್ನು ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಂದನೀಯ ಫಾ. ಶಾಜಿ ಮಾತ್ಯು, “ಸಾವು–ಬದುಕಿನ ನಡುವಿನ ಅತಿ ಸಂಕಷ್ಟದ ಕ್ಷಣಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುವ ಆಂಬುಲೆನ್ಸ್ ಚಾಲಕರ ಸೇವೆ ಅಮೂಲ್ಯವಾದದ್ದು. ಸಮಾಜವು ಅವರ ತ್ಯಾಗ ಮತ್ತು ಸೇವೆಯನ್ನು ಗುರುತಿಸಿ ಗೌರವಿಸುವುದು ಅತ್ಯವಶ್ಯಕ,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಂಬುಲೆನ್ಸ್ ಚಾಲಕರಾದ ಪಿ. ಮೊಹಮ್ಮದ್ ಮಸೂದ್, ಅಬ್ದುಲ್ ಸಮದ್ ಹಾಗೂ ಪ್ರಜ್ವಲ್ ಪಿ.ಜೆ. ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತೃವೇದಿಕೆ ಅಧ್ಯಕ್ಷೆ ಸುಜಾ ಜೇಮ್ಸ್, ಸಿಸ್ಟರ್ ಲಿಸ್ ಮಾತ್ಯು, ಯುವಜನ ಸಂಘದ ದಿಶಾ ಹಾಗೂ ಜಿತು, ಕ್ರೆಡಿಟ್ ಯೂನಿಯನ್‌ನ ಶಿಬು, ವಿನ್ಸೆಂಟ್ ಡಿ ಪೌಲ್ ಸಂಘದ ಸಣ್ಣಿ ಉಪಸ್ಥಿತರಿದ್ದರು. ಲೆಫ್ಟಿನೆಂಟ್ ಜನರಲ್ ಜಿನೋಜ್ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು. ಬೆರಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya
error: Content is protected !!