August 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಪ್ರಸಿದ್ದ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೇ 23 ರಂದು ಭತ್ತದ ನೇಜಿ ನಾಟಿ ಕಾರ್ಯಕ್ರಮವು ಜರುಗಿತು. ಕೊಡಂಗೆಯ ಪ್ರಮುಖರಾದ ಸುಬ್ರಾಯ ಗೌಡ ಕೊಡಂಗೆ ಅವರು ಭತ್ತದ ನೇಜಿ ನಾಟಿ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ದೇವಸ್ಥಾನದಿಂದ ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ಪೂಜೆಗಾಗಿ ಭತ್ತದ ತೆನೆಯನ್ನು (ಹೊಸತು) ಸಮರ್ಪಿಸುವ ಉದಾತ್ತ ಉದ್ದೇಶದಿಂದ ಈ ಕೃಷಿ ಕಾಯಕವನ್ನು ನಡೆಸಿಕೊಂಡು ಬರಲಾಗುತ್ತಿದೆ.


ಈ ಸಂದರ್ಭದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಶ್ರೀಧರ್ ರಾವ್, ದೇವಸ್ಥಾನದ ಸಮಿತಿ ಸದಸ್ಯ ನೀಲಯ್ಯ ಗೌಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹರೀಶ್ ರಾವ್ ಕಾಯಡ, ರಘು ಚಂದ್ರ ಪೂಜಾರಿ ಚಾಕೋಟೆತ್ತಡಿ ಹಾಗೂ ರಾಮಚಂದ್ರ ಗೌಡ ಕೊಳಂಬೆ, ಗ್ರಾ.ಪಂ. ಸಿಬ್ಬಂದಿ ಉಮೇಶ್, ಸೀತಾರಾಮ ಶೆಟ್ಟಿ ಕಡಮದಕೋಡಿ, ಬಾಬು ಶೆಟ್ಟಿ ಕಡಮದಕೋಡಿ, ಪ್ರಭಾಕರ ಗೌಡ ಕಾಂತ್ರೆಲು, ಮೀನಾಕ್ಷಿ ಮುಡಾಯಿ ಮಜಲು, ಗೀತಾ ಕಜೆತ್ತ ಕೋಡಿ, ವೆಂಕಪ್ಪ ಬರಮೇಲು, ಶೀಲಾವತಿ ಬರೆಂಗಾಯ ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿ ಉಮೇಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!