27.4 C
ಪುತ್ತೂರು, ಬೆಳ್ತಂಗಡಿ
July 9, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಪ್ರಸಿದ್ದ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೇ 23 ರಂದು ಭತ್ತದ ನೇಜಿ ನಾಟಿ ಕಾರ್ಯಕ್ರಮವು ಜರುಗಿತು. ಕೊಡಂಗೆಯ ಪ್ರಮುಖರಾದ ಸುಬ್ರಾಯ ಗೌಡ ಕೊಡಂಗೆ ಅವರು ಭತ್ತದ ನೇಜಿ ನಾಟಿ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ದೇವಸ್ಥಾನದಿಂದ ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ಪೂಜೆಗಾಗಿ ಭತ್ತದ ತೆನೆಯನ್ನು (ಹೊಸತು) ಸಮರ್ಪಿಸುವ ಉದಾತ್ತ ಉದ್ದೇಶದಿಂದ ಈ ಕೃಷಿ ಕಾಯಕವನ್ನು ನಡೆಸಿಕೊಂಡು ಬರಲಾಗುತ್ತಿದೆ.


ಈ ಸಂದರ್ಭದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಶ್ರೀಧರ್ ರಾವ್, ದೇವಸ್ಥಾನದ ಸಮಿತಿ ಸದಸ್ಯ ನೀಲಯ್ಯ ಗೌಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹರೀಶ್ ರಾವ್ ಕಾಯಡ, ರಘು ಚಂದ್ರ ಪೂಜಾರಿ ಚಾಕೋಟೆತ್ತಡಿ ಹಾಗೂ ರಾಮಚಂದ್ರ ಗೌಡ ಕೊಳಂಬೆ, ಗ್ರಾ.ಪಂ. ಸಿಬ್ಬಂದಿ ಉಮೇಶ್, ಸೀತಾರಾಮ ಶೆಟ್ಟಿ ಕಡಮದಕೋಡಿ, ಬಾಬು ಶೆಟ್ಟಿ ಕಡಮದಕೋಡಿ, ಪ್ರಭಾಕರ ಗೌಡ ಕಾಂತ್ರೆಲು, ಮೀನಾಕ್ಷಿ ಮುಡಾಯಿ ಮಜಲು, ಗೀತಾ ಕಜೆತ್ತ ಕೋಡಿ, ವೆಂಕಪ್ಪ ಬರಮೇಲು, ಶೀಲಾವತಿ ಬರೆಂಗಾಯ ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿ ಉಮೇಶ್ ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!