August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಮುಂಡೂರು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ, ಮುಂಡೂರು ಇದರ ವತಿಯಿಂದ ಮುಂಡೂರು ಗ್ರಾಮದ ಎಲ್ಲಾ ಧರ್ಮ ಮತ್ತು ಸಮುದಾಯದ ಮಕ್ಕಳಿಗೆ ಮೇ 24ರಂದು ಬೆಳಿಗ್ಗೆ ಶ್ರೀ ಶಾರದಾಂಬ ಯುವಕ ಮಂಡಲದ ಮೈದಾನದಲ್ಲಿ ಸ್ಫೂರ್ತಿ ಬದುಕಿನ ಹೊಸ ಚೈತನ್ಯ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.


ಮಂಗಳೂರು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ವಸಂತ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಬ್ಯಾಗ್ ಪುಸ್ತಕ ವಿತರಣೆ ಮಾಡಲಿದ್ದಾರೆ.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಜಯಂತ್ ಕೋಟ್ಯಾನ್,ಮುಂಡೂರು ಶ್ರೀ ಕ್ಷೇತ್ರ ಮಂಗಳಗಿರಿ ಮೊಕ್ತೇಸರ ರಾಜೀವ್, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ ಪ್ರಸಾದ್ ಅಧ್ಯಕ್ಷರು, ಯುವ ವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ,, ಕಾರ್ಕಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಡಾ. ಚಂದ್ರಾವತಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂದ ಉಪಾಧ್ಯಕ್ಷ ಸುಂದರ ಪೂಜಾರಿ ಭಾಗವಹಿಸಲಿದ್ದಾರೆ.


ವಿದ್ಯಾರ್ಥಿಗಳಿಗೆ, ಯುವಕ ಯುವತಿಯರಿಗೆ ಸ್ಫೂರ್ತಿ – ಬದುಕಿಗೆ ಹೊಸ ಚೈತನ್ಯ…ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಸ್ವಿತೇಶ್ ಎಸ್. ಬಾರ್ಯ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ವಸಂತ ಪೂಜಾರಿ ತಿಳಿಸಿದ್ದಾರೆ.

Related posts

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಕಕ್ಕಿಂಜೆ ಯುವಕ ಆಲ್ವಿನ್ ಸಿ. ಜೆ ಗೆ ಅಂತರರಾಷ್ಟ್ರೀಯ ಮಟ್ಟದ “ಯುವ ವಿಜ್ಞಾನಿ ಪ್ರಶಸ್ತಿ” ಗೌರವ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya
error: Content is protected !!