22.9 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಮೇ 23 ರಂದು ಅಂತಿಮ ಬಿ.ಕಾಂ ವಿದ್ಯಾರ್ಥಿಗಳಿಗಾಗಿ “ಕೇಸ್ ಸ್ಟಡೀಸ್” ವಿಷಯಾಧಾರಿತ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಿಶ್ಲೇಷಣಾತ್ಮಕ ಚಿಂತನೆ, ಸಮಸ್ಯೆ ಪರಿಹಾರ ಸಾಮರ್ಥ್ಯ, ನಿರ್ಧಾರ ಕೈಗೊಳ್ಳುವ ಕೌಶಲ್ಯ ಹಾಗೂ ವಾಣಿಜ್ಯ ಕ್ಷೇತ್ರದ ಪ್ರಾಯೋಗಿಕ ಅರಿವು ವೃದ್ಧಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿಗಳು ವಿವಿಧ ವಾಣಿಜ್ಯ ಸಂಬಂಧಿತ ಕೇಸ್ ಸ್ಟಡಿಗಳನ್ನು ಪರಿಣಾಮಕಾರಿಯಾಗಿ ಮಂಡಿಸಿ, ವ್ಯವಹಾರಿಕ ಸನ್ನಿವೇಶಗಳ ಕುರಿತು ಸಮಗ್ರ ಮಾಹಿತಿಯನ್ನು ಹಂಚಿಕೊಂಡರು. ಈ ಚಟುವಟಿಕೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಪ್ರಸ್ತುತಿಕರಣ ಕೌಶಲ್ಯ ಹಾಗೂ ತಂಡದ ಸಹಕಾರ ಮನೋಭಾವವನ್ನು ಹೆಚ್ಚಿಸಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೊ, ಸಂಯೋಜಕರಾದ ಯಶವಂತ ಜಿ. ನಾಯಕ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮಂಗಳೂರು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನೆ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!