ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಆರ್ಥಿಕ ಬಿಡ್ ಗೆ ಸರಕಾರ ಈಗಾಗಲೇ ಅನುಮೋದನೆ ನೀಡಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಇಂದು ಬೆಂಗಳೂರಿನ ನ್ಯಾಯ ಗ್ರಾಮದಲ್ಲಿರುವ ವಸತಿ ಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಚ್ ಟಿ ನರೇಂದ್ರ ಪ್ರಸಾದ್ ರವರನ್ನು ಭೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದರು.

ಇದೇ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಮಹಮ್ಮದ್ ನವಾಜ್ ರವರನ್ನು ಭೇಟಿ ಮಾಡಿ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಿದರು.
ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಉಪಾಧ್ಯಕ್ಷ ಶ್ರೀನಿವಾಸ ಗೌಡ, ಹಿರಿಯ ಸಮಿತಿ ಅಧ್ಯಕ್ಷ ಶಿವ ಕುಮಾರ್ ಎಸ್ ಎಂ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು.












