23 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಮುಂಡೂರು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ, ಮುಂಡೂರು ಇದರ ವತಿಯಿಂದ ಮುಂಡೂರು ಗ್ರಾಮದ ಎಲ್ಲಾ ಧರ್ಮ ಮತ್ತು ಸಮುದಾಯದ ಮಕ್ಕಳಿಗೆ ಮೇ 24ರಂದು ಬೆಳಿಗ್ಗೆ ಶ್ರೀ ಶಾರದಾಂಬ ಯುವಕ ಮಂಡಲದ ಮೈದಾನದಲ್ಲಿ ಸ್ಫೂರ್ತಿ ಬದುಕಿನ ಹೊಸ ಚೈತನ್ಯ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.


ಮಂಗಳೂರು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ವಸಂತ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಬ್ಯಾಗ್ ಪುಸ್ತಕ ವಿತರಣೆ ಮಾಡಲಿದ್ದಾರೆ.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಜಯಂತ್ ಕೋಟ್ಯಾನ್,ಮುಂಡೂರು ಶ್ರೀ ಕ್ಷೇತ್ರ ಮಂಗಳಗಿರಿ ಮೊಕ್ತೇಸರ ರಾಜೀವ್, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ ಪ್ರಸಾದ್ ಅಧ್ಯಕ್ಷರು, ಯುವ ವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ,, ಕಾರ್ಕಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಡಾ. ಚಂದ್ರಾವತಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂದ ಉಪಾಧ್ಯಕ್ಷ ಸುಂದರ ಪೂಜಾರಿ ಭಾಗವಹಿಸಲಿದ್ದಾರೆ.


ವಿದ್ಯಾರ್ಥಿಗಳಿಗೆ, ಯುವಕ ಯುವತಿಯರಿಗೆ ಸ್ಫೂರ್ತಿ – ಬದುಕಿಗೆ ಹೊಸ ಚೈತನ್ಯ…ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಸ್ವಿತೇಶ್ ಎಸ್. ಬಾರ್ಯ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ವಸಂತ ಪೂಜಾರಿ ತಿಳಿಸಿದ್ದಾರೆ.

Related posts

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya
error: Content is protected !!