24.9 C
ಪುತ್ತೂರು, ಬೆಳ್ತಂಗಡಿ
May 24, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

ಬೆಳ್ತಂಗಡಿ: 2026-27ನೇ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ರಾಜ್ಯದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆ ಸರಿದೂಗಿಸಲು ಸರಕಾರ ಸಜ್ಜಾಗಿದೆ. ನೂತನ ಶೈಕ್ಷಣಿಕ ವರ್ಷದಿಂದ ಮಕ್ಕಳ ವ್ಯಾಸಂಗಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದ್ದು, 51000 ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಅತಿಥಿ ಶಿಕ್ಷಕರು ಹಾಗೂ ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರು ಸೇರಿ ಒಟ್ಟು 51000 ಅತಿಥಿ ಶಿಕ್ಷಕರನ್ನು ನೇಮಿಸಿ ಕೊಳ್ಳಲು ಸರಕಾರ ಅನುಮತಿ ನೀಡಿದೆ. ಕಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷ ಮುಗಿಯುವವ ರೆಗೆ ಈ ನೇಮಕಾತಿ ಚಾಲ್ತಿಯಲ್ಲಿರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಜೂ.1ರಿಂದ ಶಾಲೆಗಳು ಆರಂಭವಾಗುತ್ತಿರುವುದರಿಂದ ಮೊದಲ ದಿನದಿಂದಲೇ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಅಂಗೀಕರಿಸಿ ಸರಕಾರ ಅನುಮತಿ ನೀಡಿದೆ.
ನೇಮಕವಾಗುವ ಒಟ್ಟು 51000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಜಿಲ್ಲಾ ಹಾಗೂ ತಾಲೂಕುವಾರು ವಿವರಗಳನ್ನು ಹೊಸ ಪ್ರಸ್ತಾವನೆ ಮೂಲಕ ಸಲ್ಲಿಸುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಕಳೆದ ವರ್ಷ ಕೂಡ ಸರಕಾರ ಇದೇ ಮಾದರಿಯಲ್ಲಿ 51000 ಅತಿಥಿ ಶಿಕ್ಷಕರನ್ನು ಒದಗಿಸಿತ್ತು. ಈ ಬಾರಿಯೂ ಶೈಕ್ಷಣಿಕ ವರ್ಷದ ಆರಂಭದಲ್ಲೇ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಿರುವುದರಿಂದ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಸರಕಾರಿ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ಸರಿದೂಗುವ ನಿರೀಕ್ಷೆಯಿದೆ. ಅತಿಥಿ ಶಿಕ್ಷಕರ ನೇಮಕಾತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೇ ನಿರಂತರ ಕಲಿಕೆಗೆ ಅವಕಾಶ ಸಿಗಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ನಿರೀಕ್ಷೆಯಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Related posts

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya
error: Content is protected !!