23.4 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

ಬೆಳ್ತಂಗಡಿ: 2026-27ನೇ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ರಾಜ್ಯದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆ ಸರಿದೂಗಿಸಲು ಸರಕಾರ ಸಜ್ಜಾಗಿದೆ. ನೂತನ ಶೈಕ್ಷಣಿಕ ವರ್ಷದಿಂದ ಮಕ್ಕಳ ವ್ಯಾಸಂಗಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದ್ದು, 51000 ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಅತಿಥಿ ಶಿಕ್ಷಕರು ಹಾಗೂ ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರು ಸೇರಿ ಒಟ್ಟು 51000 ಅತಿಥಿ ಶಿಕ್ಷಕರನ್ನು ನೇಮಿಸಿ ಕೊಳ್ಳಲು ಸರಕಾರ ಅನುಮತಿ ನೀಡಿದೆ. ಕಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷ ಮುಗಿಯುವವ ರೆಗೆ ಈ ನೇಮಕಾತಿ ಚಾಲ್ತಿಯಲ್ಲಿರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಜೂ.1ರಿಂದ ಶಾಲೆಗಳು ಆರಂಭವಾಗುತ್ತಿರುವುದರಿಂದ ಮೊದಲ ದಿನದಿಂದಲೇ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಅಂಗೀಕರಿಸಿ ಸರಕಾರ ಅನುಮತಿ ನೀಡಿದೆ.
ನೇಮಕವಾಗುವ ಒಟ್ಟು 51000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಜಿಲ್ಲಾ ಹಾಗೂ ತಾಲೂಕುವಾರು ವಿವರಗಳನ್ನು ಹೊಸ ಪ್ರಸ್ತಾವನೆ ಮೂಲಕ ಸಲ್ಲಿಸುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಕಳೆದ ವರ್ಷ ಕೂಡ ಸರಕಾರ ಇದೇ ಮಾದರಿಯಲ್ಲಿ 51000 ಅತಿಥಿ ಶಿಕ್ಷಕರನ್ನು ಒದಗಿಸಿತ್ತು. ಈ ಬಾರಿಯೂ ಶೈಕ್ಷಣಿಕ ವರ್ಷದ ಆರಂಭದಲ್ಲೇ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಿರುವುದರಿಂದ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಸರಕಾರಿ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ಸರಿದೂಗುವ ನಿರೀಕ್ಷೆಯಿದೆ. ಅತಿಥಿ ಶಿಕ್ಷಕರ ನೇಮಕಾತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೇ ನಿರಂತರ ಕಲಿಕೆಗೆ ಅವಕಾಶ ಸಿಗಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ನಿರೀಕ್ಷೆಯಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!