23.2 C
ಪುತ್ತೂರು, ಬೆಳ್ತಂಗಡಿ
July 9, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

ಬೆಳ್ತಂಗಡಿ: 2026-27ನೇ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ರಾಜ್ಯದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆ ಸರಿದೂಗಿಸಲು ಸರಕಾರ ಸಜ್ಜಾಗಿದೆ. ನೂತನ ಶೈಕ್ಷಣಿಕ ವರ್ಷದಿಂದ ಮಕ್ಕಳ ವ್ಯಾಸಂಗಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದ್ದು, 51000 ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಅತಿಥಿ ಶಿಕ್ಷಕರು ಹಾಗೂ ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರು ಸೇರಿ ಒಟ್ಟು 51000 ಅತಿಥಿ ಶಿಕ್ಷಕರನ್ನು ನೇಮಿಸಿ ಕೊಳ್ಳಲು ಸರಕಾರ ಅನುಮತಿ ನೀಡಿದೆ. ಕಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷ ಮುಗಿಯುವವ ರೆಗೆ ಈ ನೇಮಕಾತಿ ಚಾಲ್ತಿಯಲ್ಲಿರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಜೂ.1ರಿಂದ ಶಾಲೆಗಳು ಆರಂಭವಾಗುತ್ತಿರುವುದರಿಂದ ಮೊದಲ ದಿನದಿಂದಲೇ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಅಂಗೀಕರಿಸಿ ಸರಕಾರ ಅನುಮತಿ ನೀಡಿದೆ.
ನೇಮಕವಾಗುವ ಒಟ್ಟು 51000 ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಜಿಲ್ಲಾ ಹಾಗೂ ತಾಲೂಕುವಾರು ವಿವರಗಳನ್ನು ಹೊಸ ಪ್ರಸ್ತಾವನೆ ಮೂಲಕ ಸಲ್ಲಿಸುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಕಳೆದ ವರ್ಷ ಕೂಡ ಸರಕಾರ ಇದೇ ಮಾದರಿಯಲ್ಲಿ 51000 ಅತಿಥಿ ಶಿಕ್ಷಕರನ್ನು ಒದಗಿಸಿತ್ತು. ಈ ಬಾರಿಯೂ ಶೈಕ್ಷಣಿಕ ವರ್ಷದ ಆರಂಭದಲ್ಲೇ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಿರುವುದರಿಂದ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಸರಕಾರಿ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ಸರಿದೂಗುವ ನಿರೀಕ್ಷೆಯಿದೆ. ಅತಿಥಿ ಶಿಕ್ಷಕರ ನೇಮಕಾತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೇ ನಿರಂತರ ಕಲಿಕೆಗೆ ಅವಕಾಶ ಸಿಗಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ನಿರೀಕ್ಷೆಯಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Related posts

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya
error: Content is protected !!