28.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್ ನಲ್ಲಿ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ: “ವ್ಯವಹಾರ ಹಾಗೂ ಉದ್ಯಮ ಕ್ಷೇತ್ರದಲ್ಲಿ ಅವಕಾಶಗಳು ಎಲ್ಲರಿಗೂ ಸಮಾನವಾಗಿ ಲಭ್ಯವಿರುತ್ತವೆ. ಆದರೆ ಆ ಅವಕಾಶಗಳನ್ನು ಗುರುತಿಸಿ, ಬಳಸಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ  ವೀರು ಶೆಟ್ಟಿ ಹೇಳಿದರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ವತಿಯಿಂದ 30 ದಿನಗಳ ಕಾಲ ಆಯೋಜಿಸಲಾದ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.

“ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಆಶಯದಂತೆ ರುಡ್‌ಸೆಟ್ ಸಂಸ್ಥೆ ಗ್ರಾಮೀಣ ಯುವಜನರಲ್ಲಿ ಸ್ವಾವಲಂಬನೆಯ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಉದ್ಯಮ ಅಥವಾ ವ್ಯವಹಾರ ನಡೆಸುವ ಸಂದರ್ಭದಲ್ಲಿ ಅನೇಕ ಸವಾಲುಗಳು ಎದುರಾಗುತ್ತವೆ. ಅವುಗಳನ್ನು ಸಮರ್ಥವಾಗಿ ನಿಭಾಯಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು” ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿ ಉಜಿರೆಯ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ ಕುಮಾರ್ ಮಾತನಾಡಿ, “ರುಡ್‌ಸೆಟ್‌ನ ತರಬೇತಿಗಳು ಕೇವಲ ಕೌಶಲ್ಯಾಭಿವೃದ್ಧಿಗೆ ಮಾತ್ರ ಸೀಮಿತವಾಗಿಲ್ಲ. ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸುವ ದಿಕ್ಕಿನಲ್ಲಿ ಅವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ. ತರಬೇತಿಯ ಮೂಲಕ ಪಡೆದ ಜ್ಞಾನ ಮತ್ತು ಕೌಶಲ್ಯಗಳನ್ನು ಜೀವನದಲ್ಲಿ ಸದುಪಯೋಗಪಡಿಸಿಕೊಂಡು ಯಶಸ್ಸಿನತ್ತ ಸಾಗಬೇಕು” ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕ ಅಜೇಯ ಅತಿಥಿಗಳನ್ನು ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಧನ್ಯವಾದ ಸಮರ್ಪಿಸಿದರು. ಕುಮಾರಿ ಶ್ರವಣಿ ಮತ್ತು ಕುಮಾರಿ ಜಲಜಾಕ್ಷಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಉದಯ ಹಾಗೂ ನಿತೀಶ್ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡು, ರುಡ್‌ಸೆಟ್ ಸಂಸ್ಥೆಯ ತರಬೇತಿಯು ತಮ್ಮ ಜೀವನದಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದ್ದು, ಉದ್ಯೋಗ ಹಾಗೂ ಸ್ವಉದ್ಯೋಗದ ದಿಕ್ಕಿನಲ್ಲಿ ಮುನ್ನಡೆಯಲು ಪ್ರೇರಣೆ ನೀಡಿದೆ ಎಂದು ಅಭಿಪ್ರಾಯಪಟ್ಟರು.

Related posts

ಬಳಂಜ ಆನೆಪಿಲ ರಸ್ತೆಯ ಅಭಿವೃದ್ಧಿಗೆ ರಕ್ಷಿತ್ ಶಿವರಾಮ್ ರವರಿಂದ ಅನುದಾನ ನೀಡುವ ಭರವಸೆ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya
error: Content is protected !!