24.9 C
ಪುತ್ತೂರು, ಬೆಳ್ತಂಗಡಿ
May 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಪ್ರಸಿದ್ದ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೇ 23 ರಂದು ಭತ್ತದ ನೇಜಿ ನಾಟಿ ಕಾರ್ಯಕ್ರಮವು ಜರುಗಿತು. ಕೊಡಂಗೆಯ ಪ್ರಮುಖರಾದ ಸುಬ್ರಾಯ ಗೌಡ ಕೊಡಂಗೆ ಅವರು ಭತ್ತದ ನೇಜಿ ನಾಟಿ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ದೇವಸ್ಥಾನದಿಂದ ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ಪೂಜೆಗಾಗಿ ಭತ್ತದ ತೆನೆಯನ್ನು (ಹೊಸತು) ಸಮರ್ಪಿಸುವ ಉದಾತ್ತ ಉದ್ದೇಶದಿಂದ ಈ ಕೃಷಿ ಕಾಯಕವನ್ನು ನಡೆಸಿಕೊಂಡು ಬರಲಾಗುತ್ತಿದೆ.


ಈ ಸಂದರ್ಭದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಶ್ರೀಧರ್ ರಾವ್, ದೇವಸ್ಥಾನದ ಸಮಿತಿ ಸದಸ್ಯ ನೀಲಯ್ಯ ಗೌಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹರೀಶ್ ರಾವ್ ಕಾಯಡ, ರಘು ಚಂದ್ರ ಪೂಜಾರಿ ಚಾಕೋಟೆತ್ತಡಿ ಹಾಗೂ ರಾಮಚಂದ್ರ ಗೌಡ ಕೊಳಂಬೆ, ಗ್ರಾ.ಪಂ. ಸಿಬ್ಬಂದಿ ಉಮೇಶ್, ಸೀತಾರಾಮ ಶೆಟ್ಟಿ ಕಡಮದಕೋಡಿ, ಬಾಬು ಶೆಟ್ಟಿ ಕಡಮದಕೋಡಿ, ಪ್ರಭಾಕರ ಗೌಡ ಕಾಂತ್ರೆಲು, ಮೀನಾಕ್ಷಿ ಮುಡಾಯಿ ಮಜಲು, ಗೀತಾ ಕಜೆತ್ತ ಕೋಡಿ, ವೆಂಕಪ್ಪ ಬರಮೇಲು, ಶೀಲಾವತಿ ಬರೆಂಗಾಯ ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿ ಉಮೇಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!