23.4 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಪರ ಸಿವಿಲ್ ನ್ಯಾಯಾಲಯಗಳು ಹೊರಡಿಸಿರುವ ಪ್ರತಿಬಂಧಕಾದೇಶಗಳನ್ನು, ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ, ನಂದೀಶ್ ಕುಮಾರ್ ಜೈನ್ ಮತ್ತು ಡಿ.ನಿಶ್ಚಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ರಜಾಕಾಲೀನ ಏಕಸದಸ್ಯ ಪೀಠ ಈ ಆದೇಶ ನೀಡಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, “ಸಂಬಂಧಿತ ಪೊಲೀಸರು ಕಾನೂನಿನನ್ವಯ 17 ಮಾಧ್ಯಮ ಮತ್ತು ಯೂಟ್ಯೂಬ್ ಚಾನಲ್‌ಗಳ ವಿರುದ್ಧ ಕಾನೂನಿನ ಅನ್ವಯ ಕ್ರಮಕೈಗೊಂಡು ಅನುಪಾಲನಾ ವರದಿ ಸಲ್ಲಿಸಬೇಕು,” ಎಂದು ನಿರ್ದೇಶಿಸಿದೆ.
“ಪ್ರತಿವಾದಿಗಳು ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ, ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ದುರುದ್ದೇಶಪೂರಿತ ಚರ್ಚೆ, ಮಾನಹಾನಿ ವರದಿ ಮಾಡದಂತೆ ನಿರ್ಬಂಧಿಸಬೇಕು,” ಎಂದು ಅರ್ಜಿದಾರರು ಕೋರಿದ್ದಾರೆ.

ಅರ್ಜಿದಾರರ ಪರ ವಕೀಲ ಎಸ್.ರಾಜಶೇಖ‌ರ್ ಅರ್ಜಿದಾರರನ್ನು ಗುರಿಯಾಗಿಸಿಕೊಂಡು ಮಾನಹಾನಿಕರ ವಿಡಿಯೊಗಳು, ತಿರುಚಿದ ವಿಷಯ, ಸುಳ್ಳು ಆರೋಪಗಳು ಮತ್ತು ದಾರಿತಪ್ಪಿಸುವ ನಿರೂಪಣೆಗಳ ಪ್ರಸಾರ ಮಾಡುತ್ತಿದ್ದಾರೆ,” ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ.

Related posts

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ನೆರಿಯದಲ್ಲಿ ಚಿರತೆ ಪತ್ತೆ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya
error: Content is protected !!