22.9 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಮಾಜಿ ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ರವರ ದೂರಿನ ಮೇರೆಗೆ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು.9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಎಲ್ಲಾ ವಿಚಾರದ ಬಗ್ಗೆ ವಿಸ್ತೃತವಾದ ಚರ್ಚೆಯನ್ನು ನಡೆಸಿ. ಸಚಿವರು ಎಲ್ಲ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಈ ಮಾಹಿತಿಯ ಅನ್ವಯ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು, ನಗರ ಯೋಜನಾಧಿಕಾರಿಗಳು, ಮೂಡ ಕಮಿಷನರ್, ಸರ್ವೆ ಇಲಾಖೆಯ ಅಧಿಕಾರಿಗಳು, ಮೂಡ ಅಧಿಕಾರಿಗಳು, ಬೆಳ್ತಂಗಡಿಯ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಮತ್ತು ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

Suddi Udaya
error: Content is protected !!