24.9 C
ಪುತ್ತೂರು, ಬೆಳ್ತಂಗಡಿ
May 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಮಾಜಿ ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ರವರ ದೂರಿನ ಮೇರೆಗೆ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು.9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಎಲ್ಲಾ ವಿಚಾರದ ಬಗ್ಗೆ ವಿಸ್ತೃತವಾದ ಚರ್ಚೆಯನ್ನು ನಡೆಸಿ. ಸಚಿವರು ಎಲ್ಲ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಈ ಮಾಹಿತಿಯ ಅನ್ವಯ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು, ನಗರ ಯೋಜನಾಧಿಕಾರಿಗಳು, ಮೂಡ ಕಮಿಷನರ್, ಸರ್ವೆ ಇಲಾಖೆಯ ಅಧಿಕಾರಿಗಳು, ಮೂಡ ಅಧಿಕಾರಿಗಳು, ಬೆಳ್ತಂಗಡಿಯ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಮತ್ತು ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya
error: Content is protected !!