28 C
ಪುತ್ತೂರು, ಬೆಳ್ತಂಗಡಿ
July 9, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಕನ್ಯಾಡಿಯ ಕು|ಶೌರ್ಯ ಎಸ್ ವಿ ಅವರು ತನ್ನ ಅನುಭವ ಹಾಗೂ ಯುವ ಪೀಳಿಗೆಗೆ ಉತ್ತಮ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಆಸಕ್ತಿಯಿಂದ ಬರೆದಿರುವ ಈ ಪುಸ್ತಕಕ್ಕೆ ಜಗದ್ಗುರು ಪೀಠ ಶೃಂಗೇರಿ ಶ್ರೀಗಳು, ಮಂತ್ರಾಲಯ ಶ್ರೀಗಳು,ಕನ್ಯಾಡಿ ಶ್ರೀಗಳು ಶುಭ ಸಂದೇಶಗಳನ್ನು ಕಳುಹಿಸಿ ಆಶೀರ್ವದಿಸಿದ್ದಾರೆ ಹಾಗೂ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಪ್ರೋತ್ಸಾಹದ ಬೆನ್ನುಡಿ ಇರುವ ಪ್ರೀತಿ ಏಕೆ ಭೂಮಿ ಮೇಲಿದೆ ಪುಸ್ತಕವನ್ನು ಬಹಳ ಪ್ರೀತಿಯಿಂದ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು.

ಅತಿ ಚಿಕ್ಕ ವಯಸ್ಸಿನಲ್ಲಿ ಪುಸ್ತಕ ಬರೆಯುವ ಸಾಹಸ ಮಾಡಿದ ಕು ಶೌರ್ಯ ಎಸ್ ವಿ ಅವರ ಸಾಧನೆಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದರು. ಹೇಮಾವತಿ ವೀ. ಹೆಗ್ಗಡೆಯವರಿಗೆ ಬಿಡುಗಡೆ ಯ ಮೊದಲ ಪ್ರತಿಯನ್ನು ನೀಡಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ, ಸುದರ್ಶನ ಕನ್ಯಾಡಿ, ಉಪನ್ಯಾಸಕರಾದ ಮಾಧವ ಎಂಕೆ, ವಕೀಲರಾದ ಪೃಥ್ವಿಶ್ ಧರ್ಮಸ್ಥಳ, ಮಾತೃಮಂಡಳಿ ಅಧ್ಯಕ್ಷರಾದ ಮಮತಾ, ಕಾರ್ಯದರ್ಶಿ ಚಂದ್ರಾವತಿ, ಪುಸ್ತಕದ ಲೇಖಕಿ ಕು|ಶೌರ್ಯ,ಲೇಖಕಿಯವರ ತಾಯಿ ಕುಸುಮ ಉಪಸ್ಥಿತರಿದ್ದರು.

ನಂತರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ದೇವಳ ಪಾರುಪತ್ಯೆಗಾರರಾದ ಲಕ್ಷ್ಮೀನಾರಾಯಣ ರಾವ್,ಹಿರಿಯರಾದ ಆರ್ ಎನ್ ಪೂವಣಿ ಮತ್ತು ರಾಜೇಂದ್ರ ದಾಸ್ ಹಾಗೂ ಸುನಿಲ್ ಅವರಿಗೆ ಪುಸ್ತಕವನ್ನು ನೀಡಲಾಯಿತು.

Related posts

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya
error: Content is protected !!