27.4 C
ಪುತ್ತೂರು, ಬೆಳ್ತಂಗಡಿ
July 9, 2026
ಆಯ್ಕೆ

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ.ಪಿ.ಯವರಿಗೆ ಪಿಹೆಚ್‌ಡಿ ಪದವಿ

ಪುತ್ತೂರಿನ ಕಬಕ ನಿವಾಸಿ ಅಕ್ಷತಾ ಎ ಪಿ ರವರು ‘A CRITICAL STUDY ON RESOLUTION OF COMMERCIAL DISPUTES IN REAL ESTATE SECTOR THROUGH ADR MECHANISM’ ಎಂಬ ವಿಷಯದ ಮೇಲೆ ತಮ್ಮ ಪಿಹೆಚ್‌ಡಿ ಮಹಾಪ್ರಬಂಧವನ್ನು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಕ್ಕೆ (KSLU) ಸಲ್ಲಿಸಿ ಪಿಹೆಚ್‌ಡಿ ಪದವಿಯನ್ನು ಪಡೆದುಕೊಂಡಿರುತ್ತಾರೆ.

ಮಂಗಳೂರಿನ ಎಸ್‌ಡಿಎಂ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ತಾರನಾಥ್ ರವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಪೂರ್ಣಗೊಳಿಸಿರುವ ಡಾ ಅಕ್ಷತಾ ಎಪಿ ಯವರು ಪ್ರಸ್ತುತ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2019-20 ರಿಂದ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರು ಎಸ್ ಡಿ ಎಮ್ ಪಿಯು ಕಾಲೇಜ್ ಉಜಿರೆ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರಾಗಿರುವ ರಾಜೇಶ್ ಕಲ್ಬೆಟ್ಟುರವರ ಪತ್ನಿ. ಕಡಬದ ನಿವೃತ್ತ ಮೆಸ್ಕಾಂ ಇಂಜಿನಿಯರ್ ಅಣ್ಣಿ ಗೌಡ ಪಣೆಮಜಲು ಮತ್ತು ದುರ್ಗಾವತಿ ರವರ ಪುತ್ರಿ ಹಾಗೂ ಬೆಳ್ತಂಗಡಿ ತಾಲೂಕು ಮಲವಂತಿಗೆಯ ಕುಂಞಿಯಣ್ಣ ಗೌಡ ಕಲ್ಬೆಟ್ಟು ಮತ್ತು ಜಾನಕಿ ರವರ ಸೊಸೆ.

Related posts

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya
error: Content is protected !!