28.8 C
ಪುತ್ತೂರು, ಬೆಳ್ತಂಗಡಿ
August 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಕನ್ಯಾಡಿಯ ಕು|ಶೌರ್ಯ ಎಸ್ ವಿ ಅವರು ತನ್ನ ಅನುಭವ ಹಾಗೂ ಯುವ ಪೀಳಿಗೆಗೆ ಉತ್ತಮ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಆಸಕ್ತಿಯಿಂದ ಬರೆದಿರುವ ಈ ಪುಸ್ತಕಕ್ಕೆ ಜಗದ್ಗುರು ಪೀಠ ಶೃಂಗೇರಿ ಶ್ರೀಗಳು, ಮಂತ್ರಾಲಯ ಶ್ರೀಗಳು,ಕನ್ಯಾಡಿ ಶ್ರೀಗಳು ಶುಭ ಸಂದೇಶಗಳನ್ನು ಕಳುಹಿಸಿ ಆಶೀರ್ವದಿಸಿದ್ದಾರೆ ಹಾಗೂ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಪ್ರೋತ್ಸಾಹದ ಬೆನ್ನುಡಿ ಇರುವ ಪ್ರೀತಿ ಏಕೆ ಭೂಮಿ ಮೇಲಿದೆ ಪುಸ್ತಕವನ್ನು ಬಹಳ ಪ್ರೀತಿಯಿಂದ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು.

ಅತಿ ಚಿಕ್ಕ ವಯಸ್ಸಿನಲ್ಲಿ ಪುಸ್ತಕ ಬರೆಯುವ ಸಾಹಸ ಮಾಡಿದ ಕು ಶೌರ್ಯ ಎಸ್ ವಿ ಅವರ ಸಾಧನೆಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದರು. ಹೇಮಾವತಿ ವೀ. ಹೆಗ್ಗಡೆಯವರಿಗೆ ಬಿಡುಗಡೆ ಯ ಮೊದಲ ಪ್ರತಿಯನ್ನು ನೀಡಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ, ಸುದರ್ಶನ ಕನ್ಯಾಡಿ, ಉಪನ್ಯಾಸಕರಾದ ಮಾಧವ ಎಂಕೆ, ವಕೀಲರಾದ ಪೃಥ್ವಿಶ್ ಧರ್ಮಸ್ಥಳ, ಮಾತೃಮಂಡಳಿ ಅಧ್ಯಕ್ಷರಾದ ಮಮತಾ, ಕಾರ್ಯದರ್ಶಿ ಚಂದ್ರಾವತಿ, ಪುಸ್ತಕದ ಲೇಖಕಿ ಕು|ಶೌರ್ಯ,ಲೇಖಕಿಯವರ ತಾಯಿ ಕುಸುಮ ಉಪಸ್ಥಿತರಿದ್ದರು.

ನಂತರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ದೇವಳ ಪಾರುಪತ್ಯೆಗಾರರಾದ ಲಕ್ಷ್ಮೀನಾರಾಯಣ ರಾವ್,ಹಿರಿಯರಾದ ಆರ್ ಎನ್ ಪೂವಣಿ ಮತ್ತು ರಾಜೇಂದ್ರ ದಾಸ್ ಹಾಗೂ ಸುನಿಲ್ ಅವರಿಗೆ ಪುಸ್ತಕವನ್ನು ನೀಡಲಾಯಿತು.

Related posts

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya
error: Content is protected !!