28 C
ಪುತ್ತೂರು, ಬೆಳ್ತಂಗಡಿ
July 9, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಕನ್ಯಾಡಿಯ ಕು|ಶೌರ್ಯ ಎಸ್ ವಿ ಅವರು ತನ್ನ ಅನುಭವ ಹಾಗೂ ಯುವ ಪೀಳಿಗೆಗೆ ಉತ್ತಮ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಆಸಕ್ತಿಯಿಂದ ಬರೆದಿರುವ ಈ ಪುಸ್ತಕಕ್ಕೆ ಜಗದ್ಗುರು ಪೀಠ ಶೃಂಗೇರಿ ಶ್ರೀಗಳು, ಮಂತ್ರಾಲಯ ಶ್ರೀಗಳು,ಕನ್ಯಾಡಿ ಶ್ರೀಗಳು ಶುಭ ಸಂದೇಶಗಳನ್ನು ಕಳುಹಿಸಿ ಆಶೀರ್ವದಿಸಿದ್ದಾರೆ ಹಾಗೂ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಪ್ರೋತ್ಸಾಹದ ಬೆನ್ನುಡಿ ಇರುವ ಪ್ರೀತಿ ಏಕೆ ಭೂಮಿ ಮೇಲಿದೆ ಪುಸ್ತಕವನ್ನು ಬಹಳ ಪ್ರೀತಿಯಿಂದ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು.

ಅತಿ ಚಿಕ್ಕ ವಯಸ್ಸಿನಲ್ಲಿ ಪುಸ್ತಕ ಬರೆಯುವ ಸಾಹಸ ಮಾಡಿದ ಕು ಶೌರ್ಯ ಎಸ್ ವಿ ಅವರ ಸಾಧನೆಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದರು. ಹೇಮಾವತಿ ವೀ. ಹೆಗ್ಗಡೆಯವರಿಗೆ ಬಿಡುಗಡೆ ಯ ಮೊದಲ ಪ್ರತಿಯನ್ನು ನೀಡಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ, ಸುದರ್ಶನ ಕನ್ಯಾಡಿ, ಉಪನ್ಯಾಸಕರಾದ ಮಾಧವ ಎಂಕೆ, ವಕೀಲರಾದ ಪೃಥ್ವಿಶ್ ಧರ್ಮಸ್ಥಳ, ಮಾತೃಮಂಡಳಿ ಅಧ್ಯಕ್ಷರಾದ ಮಮತಾ, ಕಾರ್ಯದರ್ಶಿ ಚಂದ್ರಾವತಿ, ಪುಸ್ತಕದ ಲೇಖಕಿ ಕು|ಶೌರ್ಯ,ಲೇಖಕಿಯವರ ತಾಯಿ ಕುಸುಮ ಉಪಸ್ಥಿತರಿದ್ದರು.

ನಂತರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ದೇವಳ ಪಾರುಪತ್ಯೆಗಾರರಾದ ಲಕ್ಷ್ಮೀನಾರಾಯಣ ರಾವ್,ಹಿರಿಯರಾದ ಆರ್ ಎನ್ ಪೂವಣಿ ಮತ್ತು ರಾಜೇಂದ್ರ ದಾಸ್ ಹಾಗೂ ಸುನಿಲ್ ಅವರಿಗೆ ಪುಸ್ತಕವನ್ನು ನೀಡಲಾಯಿತು.

Related posts

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ಅಡ್ಡ ಮತದಾನ ವಿವಾದ: ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya
error: Content is protected !!