24.4 C
ಪುತ್ತೂರು, ಬೆಳ್ತಂಗಡಿ
May 25, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಕನ್ಯಾಡಿಯ ಕು|ಶೌರ್ಯ ಎಸ್ ವಿ ಅವರು ತನ್ನ ಅನುಭವ ಹಾಗೂ ಯುವ ಪೀಳಿಗೆಗೆ ಉತ್ತಮ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಆಸಕ್ತಿಯಿಂದ ಬರೆದಿರುವ ಈ ಪುಸ್ತಕಕ್ಕೆ ಜಗದ್ಗುರು ಪೀಠ ಶೃಂಗೇರಿ ಶ್ರೀಗಳು, ಮಂತ್ರಾಲಯ ಶ್ರೀಗಳು,ಕನ್ಯಾಡಿ ಶ್ರೀಗಳು ಶುಭ ಸಂದೇಶಗಳನ್ನು ಕಳುಹಿಸಿ ಆಶೀರ್ವದಿಸಿದ್ದಾರೆ ಹಾಗೂ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ಪ್ರೋತ್ಸಾಹದ ಬೆನ್ನುಡಿ ಇರುವ ಪ್ರೀತಿ ಏಕೆ ಭೂಮಿ ಮೇಲಿದೆ ಪುಸ್ತಕವನ್ನು ಬಹಳ ಪ್ರೀತಿಯಿಂದ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು.

ಅತಿ ಚಿಕ್ಕ ವಯಸ್ಸಿನಲ್ಲಿ ಪುಸ್ತಕ ಬರೆಯುವ ಸಾಹಸ ಮಾಡಿದ ಕು ಶೌರ್ಯ ಎಸ್ ವಿ ಅವರ ಸಾಧನೆಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದರು. ಹೇಮಾವತಿ ವೀ. ಹೆಗ್ಗಡೆಯವರಿಗೆ ಬಿಡುಗಡೆ ಯ ಮೊದಲ ಪ್ರತಿಯನ್ನು ನೀಡಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ, ಸುದರ್ಶನ ಕನ್ಯಾಡಿ, ಉಪನ್ಯಾಸಕರಾದ ಮಾಧವ ಎಂಕೆ, ವಕೀಲರಾದ ಪೃಥ್ವಿಶ್ ಧರ್ಮಸ್ಥಳ, ಮಾತೃಮಂಡಳಿ ಅಧ್ಯಕ್ಷರಾದ ಮಮತಾ, ಕಾರ್ಯದರ್ಶಿ ಚಂದ್ರಾವತಿ, ಪುಸ್ತಕದ ಲೇಖಕಿ ಕು|ಶೌರ್ಯ,ಲೇಖಕಿಯವರ ತಾಯಿ ಕುಸುಮ ಉಪಸ್ಥಿತರಿದ್ದರು.

ನಂತರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ದೇವಳ ಪಾರುಪತ್ಯೆಗಾರರಾದ ಲಕ್ಷ್ಮೀನಾರಾಯಣ ರಾವ್,ಹಿರಿಯರಾದ ಆರ್ ಎನ್ ಪೂವಣಿ ಮತ್ತು ರಾಜೇಂದ್ರ ದಾಸ್ ಹಾಗೂ ಸುನಿಲ್ ಅವರಿಗೆ ಪುಸ್ತಕವನ್ನು ನೀಡಲಾಯಿತು.

Related posts

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya
error: Content is protected !!