34.3 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡ್ಗಿಚ್ಚು, ಹುಲಿ ಗಣತಿ ಹಿನ್ನೆಲೆ ಪ್ರವಾಸಿಗರ ಸಂಚಾರಕ್ಕೆ ವಿಧಿಸಿದ್ದ ನಿಷೇಧ ತೆರವು: ಜೂ.1 ರಿಂದ ಪ್ರವಾಸಿಗರಿಗೆ ಚಾರಣ, ಜಲಪಾತ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂನ್ 1ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ನೇತ್ರಾವತಿ ಪೀಕ್, ಬಂಡಾಜೆ ಜಲಪಾತ, ಗಡಾಯಿಕಲ್ಲು ಮೊದಲಾದ ಸ್ಥಳಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು.

ಬೇಸಿಗೆಯಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ತಾಲೂಕಿನ ಮಲವಂತಿಗೆ ಗ್ರಾಮ ಅತಿ ಹೆಚ್ಚು ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಇದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿದೆ. ಅರಣ್ಯ ಪ್ರದೇಶವಾದ ಇಲ್ಲಿಗೆ ಚಾರಣಿಗರು, ಜಲಪಾತ ವೀಕ್ಷಕರು ಆಗಮಿಸುತ್ತಾರೆ. ಆದರೆ ಬೇಸಿಗೆಯಲ್ಲಿ ಈ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಪ್ರಕರಣಗಳ ಭಯ ಸಾಕಷ್ಟಿದೆ. ಇಲ್ಲಿ ಒಂದು ಕಿಡಿ ಬೆಂಕಿ ಬಿದ್ದರೂ ಅದು ತಕ್ಷಣ ಇಡೀ ಪರಿಸರವನ್ನು ವ್ಯಾಪಿಸುತ್ತದೆ. ಪ್ರವಾಸಿಗರಿಗೆ ಎಷ್ಟೇ ಎಚ್ಚರಿಕೆ ನೀಡಿದರೂ ಅದನ್ನು ಗಣನೆಗೆ ತೆಗೆದುಕೊಳ್ಳದೇ ಇರುವುದರಿಂದ ಅನಾಹುತಗಳು ಉಂಟಾಗುತ್ತವೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಇಲಾಖೆ ನಿಷೇಧ ಹೇರಿತ್ತು.

ಕಡಮ ಗುಂಡಿ ಹಾಗೂ ಬೊಳ್ಳೆ ಜಲಪಾತಗಳು ಈಗಾಗಲೇ ಸಾರ್ವಜನಿಕರ ವೀಕ್ಷಣೆಗೆ ತೆರೆದುಕೊಂಡಿವೆ. ಖಾಸಗಿ ಸ್ಥಳದಲ್ಲಿರುವ ಎರ್ಮಾಯಿ ಜಲಪಾತ ವೀಕ್ಷಣೆಗೆ ಯಾವುದೇ ನಿರ್ಬಂಧ ಇರಲಿಲ್ಲ.

ಮಳೆ ಸಹಕಾರ: ಈ ಬಾರಿ ಆಗಾಗ ಸುರಿದ ಬೇಸಿಗೆ ಮಳೆಯಿಂದ ಅರಣ್ಯ ಪ್ರದೇಶವೆಲ್ಲ ಒದ್ದೆಯಾಗಿದ್ದು, ಹಸಿರಿನಿಂದ ನಳನಳಿಸುತ್ತಿದೆ. ಅಲ್ಲಿನ ಹಳ್ಳ, ತೊರೆಗಳಲ್ಲಿ ಸಾಮಾನ್ಯ ಪ್ರಮಾಣದ ನೀರ ಹರಿವು ಆರಂಭವಾಗಿದೆ. ಇದರಿಂದ ಪ್ರಸ್ತುತ ಬೆಂಕಿ ಪ್ರಕರಣ, ಕಾಡ್ಗಿಚ್ಚಿನ ಭಯ ದೂರವಾಗಿದ್ದು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಆ ಸಮಯ ಜಲಪಾತಗಳು ಹೆಚ್ಚಿನ ನೀರಿನೊಂದಿಗೆ ತಮ್ಮ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲಿವೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!