29 C
ಪುತ್ತೂರು, ಬೆಳ್ತಂಗಡಿ
May 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಮೇ ತಿಂಗಳ ಸಾಮಾನ್ಯ ಸಭೆಯು ಮೇ 23 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದರು. ಇದೇ ತಿಂಗಳ 31 ರಂದು ಕಾಪುವಿನಲ್ಲಿ ನಡೆಯುವ ವಲಯ 15ರ ಮಧ್ಯಾಂತರ ಸಮ್ಮೇಳನ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿರ್ಣಯಿಸಲಾಯಿತು. ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಘಟಕದ ಅಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ದಕ್ಷಾ ಜೈನ್ ವಾಚಿಸಿದರು. ನಿಕಟಪೂರ್ವಾಧ್ಯಕ್ಷರಾದ ಡಾ‌. ಶೋಭಾ ಪಿ., ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್, ಯುವ ಜೆಸಿ ಅಧ್ಯಕ್ಷೆ ಆದ್ಯಾ ಜೈನ್, ಅಕ್ಷತ್ ರೈ, ಆಯುಷ್ ಜೈನ್ ಅವರು ಚರ್ಚೆಯಲ್ಲಿ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya
error: Content is protected !!