26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

ಬೆಳ್ತಂಗಡಿ: ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೊಲ್ಲಪಟ್ಟ – ಪಲ್ಕೆ ಹೊಡಿ ಕಾರ್ ಕಾಂಕ್ರೀಟ್ ರಸ್ತೆಯ ಇಕ್ಕಲಗಳಲ್ಲಿ ಅಳವಡಿಸಲಾದ ಇಂಟರ್ಲಾಕ್ ಕಾಮಗಾರಿಯಲ್ಲಿ ಕಲಪೆ ನಡೆದಿದೆ ಎಂದು ಆರೋಪಿಸಿ, ಎಸ್.ಡಿ.ಪಿ.ಐ ನಾವೂರು ಗ್ರಾಮ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆ ಕಾಂಕ್ರೀಟೀಕರಣದ ವೇಳೆ ಅಳವಡಿಸಲಾದ ಇಂಟರ್ಲಾಕ್‌ಗಳು ಕಳಪೆ ಕಾಮಗಾರಿಯಿಂದ ಕೇವಲ ಒಂದು ವರ್ಷದೊಳಗೆ ಬಿರುಕು ಬಿಟ್ಟಿದ್ದು, ಕಾಮಗಾರಿಯನ್ನು ಸಂಪೂರ್ಣ ಫಿನಿಶಿಂಗ್ ಮಾಡದೇ ಅರ್ಧದಲ್ಲೇ ಬಿಟ್ಟು ಹೋಗಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇದರಿಂದ ಸಾರ್ವಜನಿಕರಿಗೆ ಸಂಚಾರ ತೊಂದರೆ ಉಂಟಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಅಲ್ಲದೆ ಕಾಮಗಾರಿಯಲ್ಲಿ ಗುತ್ತಿಗೆದಾರರು ಭ್ರಷ್ಟಾಚಾರ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸಾರ್ವಜನಿಕರನ್ನು ಸೇರಿಸಿಕೊಂಡು ಶೀಘ್ರದಲ್ಲೇ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಸ್.ಡಿ.ಪಿ.ಐ ನಾವೂರು ಗ್ರಾಮ ಸಮಿತಿ ಎಚ್ಚರಿಸಿದೆ.

ಈ ವೇಳೆ ಎಸ್ ಡಿ ಪಿ ಐ ನಾವೂರು ಬ್ರಾಂಚ್ ಅಧ್ಯಕ್ಷ ಸ್ವಾದಿಕ್ ನಾವೂರು, ಉಪಾಧ್ಯಕ್ಷ ಸ್ವಾದಿಕ್ ಅಶ್ರಫ್ ಕಿರ್ನಡ್ಕ, ಕಾರ್ಯದರ್ಶಿ ಸಲೀಂ ಮುರ, ಪಕ್ಷದ ಮುಖಂಡರಾದ ಖಾದರ್ ನಾವೂರು, ಬಶೀರ್ ಕಳಸ, ಹಂಝ ರವರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya
error: Content is protected !!