26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳ ಕೇಸ್ ಸ್ಟಡಿ ಹಾಗೂ ಅದಕ್ಕೆ ಪರಿಹಾರಗಳು ಎಂಬ ವಿಷಯದ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಈ ಕಾರ್ಯಾಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ ಪ್ರಾಂಶುಪಾಲರಾದ ಡಾ . ವಿಶ್ವನಾಥ್ .ಪಿ ದೀಪ ಪ್ರಜ್ವಲಿಸಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಶಿಕ್ಷಕರ ಜವಾಬ್ದಾರಿ, ಶಿಕ್ಷಕರಿಗೆ ಬೇಕಾದ ಕೌಶಲಗಳು, ವಿದ್ಯಾರ್ಥಿಗಳನ್ನು ತಯಾರು ಮಾಡುವ ರೀತಿ, ಶಿಕ್ಷಕರ ಪಾತ್ರ ಏನು ಎಂಬಿತ್ಯಾದಿ ವಿಚಾರಗಳನ್ನು ತಿಳಿಯಪಡಿಸಿದರು. ಮಂಗಳೂರಿನ ಸೈಂಟ್ ಆಗ್ನೆಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಕಾವ್ಯಶ್ರೀ ಕೆ.ಬಿ.ಮಾತನಾಡಿ ಕಾರ್ಯಾಗಾರದ ರೂಪು ರೇಷೆಗಳ ಕುರಿತು ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಶಿಕ್ಷಕರಿಗೆ ಕಾರ್ಯಾಗಾರದ ಅಗತ್ಯತೆಗಳ ಕುರಿತು ಮಾಹಿತಿ ನೀಡಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಗೀತಾ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕಾವ್ಯ ಸ್ವಾಗತಿಸಿ, ರಮಾರಾಜೇಶ್ ಧನ್ಯವಾದವಿತ್ತರು. ಮನಿಷಾ ಕಾರ್ಯಾಗಾರಕ್ಕೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿನ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಇಲ್ಲಿನ ಶಿಕ್ಷಕ ವೃಂದದವರು ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!