24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ ಅವರಿಗೆ 2025ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಎಚ್‌. ಎನ್‌. ಮಿಥುನ್ ಮಾತನಾಡಿ, ಮಂಗಳೂರಿನ ಪತ್ರಕರ್ತರು ಸಂಯಮ, ಸಾಮಾಜಿಕ ಕಳಕಳಿ ಯಿಂದ ಕೆಲಸ ಮಾಡುತ್ತಿದ್ದಾರೆ. ನಿಸ್ವಾರ್ಥ ಸೇವಕರನ್ನು ಗುರುತಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಪ್ರೆಸ್‌ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾದವರನ್ನು ಗೌರವಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

Related posts

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!