August 29, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

ಕೊಯ್ಯೂರು : ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಇಲ್ಲಿ ಭಜನೆಗೆ ಬರುವಂತಹ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಹಾಗೂ ಹತ್ತನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದಾಗ ಅವರನ್ನು ಗುರುತಿಸಿ ಅಭಿನಂದಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು ಹಲವಾರು ವರ್ಷಗಳಿಂದ ಮಾಡಿಕೊಂಡು ಬರುತ್ತಿದೆ.
ಅದರಂತೆ 2025-2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನದೊಂದಿಗೆ 600 ಅಂಕಗಳಲ್ಲಿ 597 ಅಂಕಗಳನ್ನು ಪಡೆದ ಅಕ್ಷಯ್ ಕೋರ್ಯಾರು, 10ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಕುಮಾರಿ ಪ್ರಜ್ಞಾ ಎನ್ ಗೌಡ ಹಾಗೂ ಕುಮಾರಿ ನಿಶಾ ಬೆರ್ಕೆ ಇವರುಗಳನ್ನು ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ಅಭಿನಂದಿಸಿ ಪ್ರೋತ್ಸಾಹಿಸಲಾಯಿತು.

ಅಭಿನಂದನೆಗಳನ್ನು ಸ್ವೀಕರಿಸಿದ ವಿದ್ಯಾರ್ಥಿಗಳು ಭಜನಾ ಮಂದಿರದ ಆರಾಧ್ಯ ದೇವರಿಗೆ ಶಿರಬಾಗುತ್ತಾ ಭಜನೆಯೊಂದಿಗೆ ನಮ್ಮ ವಿದ್ಯಾಭ್ಯಾಸಕ್ಕೂ ನಿರಂತರವಾಗಿ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿರುವ ಭಜನಾ ಮಂಡಳಿಯ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಸದಸ್ಯರುಗಳಿಗೆ ನಾವು ಚಿರಋಣಿಗಳೆಂದರು.
ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಕಾಸು ಇವರ ಸಹಕಾರದೊಂದಿಗೆ ಊರಿನ ಹಿರಿಯರು ಪ್ರಗತಿಪರ ಕೃಷಿಕರು ಭಜನಾ ಮಂಡಳಿಯ ಹಿರಿಯ ಸದಸ್ಯ ಪ್ರಚಂಡ ಬಾನು ಭಟ್ ಪಾಂಬೆಲು ಇವರು ವಿದ್ಯಾರ್ಥಿಗಳನ್ನು ಭಜಕರೆಲ್ಲರ ಸಮ್ಮುಖದಲ್ಲಿ ಸನ್ಮಾನಿಸಿ ಭಜನೆಯೊಂದಿಗೆ ಭಜನೆಗೆ ಬಂದಂತಹ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಕೂಡ ಉತ್ತೇಜನ ನೀಡಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಇಂತಹ ಕೆಲಸಗಳು ಎಲ್ಲಾ ಭಜನಾ ಮಂಡಳಿಗಳಲ್ಲಿಯೂ ನಡೆದರೆ ಭವಿಷ್ಯದ ಉತ್ತಮ ಸಮಾಜ ನಿರ್ಮಾಣಕ್ಕೆ ಭಜನಾ ಮಂಡಳಿಯ ಕೊಡುಗೆಯು ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವ ಅಧ್ಯಕ್ಷ ವಿಶ್ವನಾಥಗೌಡ ಬಚ್ಚಿರ್ದಡಿ, ಸಲಹೆಗಾರರಾದ ಶೇಖರಗೌಡ ಕೋರ್ಯಾರು, ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ ಆದರ್ಶ ನಗರ , ಜೊತೆ ಕಾರ್ಯದರ್ಶಿ ಶಶಿಧರ ಕೆರೆಹಿತ್ತಿಲು, ಕೋಶಾಧಿಕಾರಿ ಬಾಲಕೃಷ್ಣ ಸಾಲಿಯಾನ್ ಆದರ್ಶ ನಗರ, ಲೆಕ್ಕಪರಿಶೋಧಕರಾದ ಹೇಮಂತ ದೇಂತ್ಯಾರು ಬೊಟ್ಟು, ಭಜನಾ ಮಂದಿರದ ಅರ್ಚಕರಾದ ಹೇಮಂತ ನಾಗನೋಡಿ ಹಿರಿಯ ಸದಸ್ಯರುಗಳಾದ ಮನೋಜ್ ಕಜೆ, ದೇಜಪ್ಪ ಗೌಡ ಬೆಲ್ಡೆ, ದಯಾನಂದ್ ಆಚಾರ್ಯ ಆದರ್ಶ ನಗರ, ವಸಂತ ನೇಕಾರ ಮುಂಡೆವು ಹಾಗೂ ಭಜಕರೆಲ್ಲರೂ ಉಪಸ್ಥಿತರಿದ್ದರು.

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ರವರು ವಿದ್ಯಾರ್ಥಿಗಳಿಗೆ ಅಭಿನಂದನ ನುಡಿಯನ್ನು ನುಡಿದರು.
ಭಜನಾ ಮಂಡಳಿಯ ಲೆಕ್ಕಪರಿಶೋಧಕ ಲಿಂಗಪ್ಪಗೌಡ ಬೆರ್ಕೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಭಜನಾ ಮಂಡಳಿಯ ಸದಸ್ಯರಾದ ನಾರಾಯಣ ನಾಯ್ಕ ವಂದಿಸಿದರು.

Related posts

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭೇಟಿ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya
error: Content is protected !!