26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

ಬೆಳ್ತಂಗಡಿ: ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೊಲ್ಲಪಟ್ಟ – ಪಲ್ಕೆ ಹೊಡಿ ಕಾರ್ ಕಾಂಕ್ರೀಟ್ ರಸ್ತೆಯ ಇಕ್ಕಲಗಳಲ್ಲಿ ಅಳವಡಿಸಲಾದ ಇಂಟರ್ಲಾಕ್ ಕಾಮಗಾರಿಯಲ್ಲಿ ಕಲಪೆ ನಡೆದಿದೆ ಎಂದು ಆರೋಪಿಸಿ, ಎಸ್.ಡಿ.ಪಿ.ಐ ನಾವೂರು ಗ್ರಾಮ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆ ಕಾಂಕ್ರೀಟೀಕರಣದ ವೇಳೆ ಅಳವಡಿಸಲಾದ ಇಂಟರ್ಲಾಕ್‌ಗಳು ಕಳಪೆ ಕಾಮಗಾರಿಯಿಂದ ಕೇವಲ ಒಂದು ವರ್ಷದೊಳಗೆ ಬಿರುಕು ಬಿಟ್ಟಿದ್ದು, ಕಾಮಗಾರಿಯನ್ನು ಸಂಪೂರ್ಣ ಫಿನಿಶಿಂಗ್ ಮಾಡದೇ ಅರ್ಧದಲ್ಲೇ ಬಿಟ್ಟು ಹೋಗಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇದರಿಂದ ಸಾರ್ವಜನಿಕರಿಗೆ ಸಂಚಾರ ತೊಂದರೆ ಉಂಟಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಅಲ್ಲದೆ ಕಾಮಗಾರಿಯಲ್ಲಿ ಗುತ್ತಿಗೆದಾರರು ಭ್ರಷ್ಟಾಚಾರ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸಾರ್ವಜನಿಕರನ್ನು ಸೇರಿಸಿಕೊಂಡು ಶೀಘ್ರದಲ್ಲೇ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಸ್.ಡಿ.ಪಿ.ಐ ನಾವೂರು ಗ್ರಾಮ ಸಮಿತಿ ಎಚ್ಚರಿಸಿದೆ.

ಈ ವೇಳೆ ಎಸ್ ಡಿ ಪಿ ಐ ನಾವೂರು ಬ್ರಾಂಚ್ ಅಧ್ಯಕ್ಷ ಸ್ವಾದಿಕ್ ನಾವೂರು, ಉಪಾಧ್ಯಕ್ಷ ಸ್ವಾದಿಕ್ ಅಶ್ರಫ್ ಕಿರ್ನಡ್ಕ, ಕಾರ್ಯದರ್ಶಿ ಸಲೀಂ ಮುರ, ಪಕ್ಷದ ಮುಖಂಡರಾದ ಖಾದರ್ ನಾವೂರು, ಬಶೀರ್ ಕಳಸ, ಹಂಝ ರವರು ಉಪಸ್ಥಿತರಿದ್ದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya
error: Content is protected !!