ಅಯೋಧ್ಯೆ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಅಯೋಧ್ಯೆ ಶಾಖಾ ಮಠದ ಕೆಲಸ ಕಾರ್ಯಗಳು ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ.

ಈಗಾಗಲೇ ಅಯೋಧ್ಯೆ ಶಾಖಾ ಮಠದ ರೂಪುರೇಶಗಳನ್ನು ತಯಾರಿಸಿ,ಕಾಂಕ್ರೀಟ್ ಕೆಲಸಗಳು ಪ್ರಾರಂಭಗೊಂಡಿದೆ. ಬಹು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಯೋಧ್ಯೆ ಶಾಖಾ ಮಠ ಹೈಟೆಕ್ ಸೌಲಭ್ಯವನ್ನು ನೀಡಲಾಗುತ್ತಿದೆ.

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾತನಾಡಿ ಅಯೋಧ್ಯೆ ಶಾಖಾಮಠದ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದ್ದು, 50 ಸಾವಿರ ಚದರ ಅಡಿ ವಿಸ್ತೀರ್ಣದ ಕಟ್ಟಡದಲ್ಲಿ 50 ವಸತಿಗೃಹಗಳು, ಒಂದು ಸಾವಿರ ಮಂದಿ ಕುಳಿತುಕೊಳ್ಳಬಹುದಾದ ಸಭಾ ಭವನ ನಿರ್ಮಿಸಲಾಗುವುದು.ಮುಂದಿನ ದಿನಗಳಲ್ಲಿ ತಿರುಪತಿ, ಶಬರಿಮಲೆ, ಕೇರಳ ಮತ್ತು ಶಿವಮೊಗ್ಗದಲ್ಲಿ ಶಾಖಾಮಠ ನಿರ್ಮಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.











